ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ ದಾಖಲು

ನವದೆಹಲಿ: ಗುಜರಾತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಹೊಸ ಮಾನನಷ್ಟ ಮೊಕದ್ದಮೆಯನ್ನು ಎದುರಿಸುತ್ತಿದ್ದಾರೆ. ಭಾರತ ಜೋಡೋ ಯಾತ್ರೆಯಲ್ಲಿ ಭಾಗವಹಿಸುವಾಗ ರಾಹುಲ್‌ ಗಾಂಧಿ ಮಾಡಿದ ಕಾಮೆಂಟ್‌ಗಳ ಕುರಿತು ಶುಕ್ರವಾರ ಹರಿದ್ವಾರದ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ಜನವರಿಯಲ್ಲಿ ಮಾಡಿದ ಭಾಷಣದಲ್ಲಿ, ಗಾಂಧಿಯವರು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (RSS) “21 ನೇ ಶತಮಾನದ ಕೌರವರು” ಎಂದು ಕರೆದಿದ್ದರು ಎಂಬುದು ಈ ಪ್ರಕರಣಕ್ಕೆ ಕಾರಣವಾಗಿದೆ.
2014 ರ ಭಾಷಣದಲ್ಲಿ ಮಹಾತ್ಮ ಗಾಂಧಿಯವರ ಹತ್ಯೆಗೆ ಆರ್‌ಎಸ್‌ಎಸ್ ಅನ್ನು ದೂಷಿಸಿದ ನಂತರ ಗಾಂಧಿ ಅವರು ಮಹಾರಾಷ್ಟ್ರದ ಥಾಣೆಯಲ್ಲಿ ಮೂರನೇ ಮಾನನಷ್ಟ ಮೊಕದ್ದಮೆಯನ್ನು ಎದುರಿಸುತ್ತಿದ್ದಾರೆ.
ಜನವರಿಯಲ್ಲಿ ನಡೆದ ಭಾರತ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (RSS) “21 ನೇ ಶತಮಾನದ ಕೌರವರು” ಎಂದು ಕರೆದಿದ್ದಕ್ಕಾಗಿ ಅವರ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ಆರೆಸ್ಸೆಸ್ ಸ್ವಯಂಸೇವಕ ಕಮಲ್ ಭಡೋರಿಯಾ ಅವರ ಪರವಾಗಿ ದೂರು ಸಲ್ಲಿಸಲಾಗಿದೆ ಎಂದು ವಕೀಲ ಅರುಣ್ ಭಡೋರಿಯಾ ಹೇಳಿದ್ದಾರೆ. ಏಪ್ರಿಲ್ 12 ರಂದು ನ್ಯಾಯಾಲಯವು ದೂರಿನ ವಿಚಾರಣೆ ನಡೆಸಲಿದೆ ಎಂದು ಅವರು ಹೇಳಿದರು.
ಈ ದೂರು ಜನವರಿಯಲ್ಲಿ ಕುರುಕ್ಷೇತ್ರದಲ್ಲಿ ರಾಹುಲ್‌ ಗಾಂಧಿ ಹೇಳಿಕೆಗೆ ಸಂಬಂಧಿಸಿದೆ. ಅವರು (ಗಾಂಧಿ) ಆರ್‌ಎಸ್‌ಎಸ್ ಅನ್ನು 21 ನೇ ಶತಮಾನದ ಕೌರವ ಎಂದು ಹೇಳಿದ್ದಾರೆ ಎಂದು ವಕೀಲ ಅರುಣ್ ಹೇಳಿದ್ದಾರೆ. ಕಮಲ್ ಭಡೋರಿಯಾ ಅವರು ರಾಹುಲ್‌ ಗಾಂಧಿಗೆ ಕಳುಹಿಸಿದ ಲೀಗಲ್ ನೋಟಿಸ್‌ಗೆ ಅವರು ಪ್ರತಿಕ್ರಿಯಿಸಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಬೈಕ್​ಗೆ ಡಿಕ್ಕಿ ಹೊಡೆದ ನಂತ್ರ ದೂರ ಎಳೆದೊಯ್ದ ಲಾರಿ..: ಟ್ರಕ್‌ ಹಿಡಿದುಕೊಂಡು ನೇತಾಡುತ್ತಿದ್ದ ಸವಾರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement