ವೀಡಿಯೊ: ಕಾಂಗ್ರೆಸ್‌ ಪ್ರತಿಭಟನೆ ವೇಳೆ ವೇದಿಕೆ ಕುಸಿತ: ಇಬ್ಬರು ಮುಖಂಡರಿಗೆ ಗಾಯ | ದೃಶ್ಯ ಕ್ಯಾಮರಾದಲ್ಲಿ ಸೆರೆ

ಬಿಲಾಸಪುರ : ಛತ್ತೀಸ್‌ಗಢದ ಬಿಲಾಸಪುರದಲ್ಲಿ ಪಂಜಿನ ಪ್ರತಿಭಟನೆ ವೇಳೆ ವೇದಿಕೆ ಮುರಿದು ಬಿದ್ದು ವೇದಿಕೆ ಮೇಲಿದ್ದ ಹಲವರು ಕೆಳಗೆ ಬಿದ್ದಿದ್ದಾರೆ. ಲೋಕಸಭೆಯಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ನಗರದಲ್ಲಿ ಪಂಜಿನ ರ್ಯಾಲಿಯನ್ನು ಆಯೋಜಿಸಿದ್ದರು, ಆದರೆ ಈ ವೇಳೆ ವೇದಿಕೆ ಮೇಲೆ ಜನದಟ್ಟಣೆಯಿಂದಾಗಿ ವೇದಿಕೆ ಕುಸಿದುಬಿದ್ದಿದೆ.
ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರು ಗಾಯಗೊಂಡಿದ್ದಾರೆ ಹಾಗೂ ಪಕ್ಷದ ಇತರ ಕೆಲವು ಸದಸ್ಯರೂ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ ಕಿಕ್ಕಿರಿದ ವೇದಿಕೆಯು ಏಕಾಏಕಿ ಕುಸಿದು ಬೀಳುವುದು ಕಂಡುಬರುತ್ತದೆ.
ಘಟನೆಯಲ್ಲಿ ಶಾಸಕರಾದ ಶೈಲೇಶ್ ಪಾಂಡೆ ಮತ್ತು ರಶ್ಮಿ ಸಿಂಗ್ ಮತ್ತು ಪಕ್ಷದ ಇತರ ಕೆಲವು ನಾಯಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ. ‘ಪ್ರಜಾಪ್ರಭುತ್ವ ಉಳಿಸಿ ಪಂಜಿನ ರ್ಯಾಲಿ’ಯನ್ನು ಗಾಂಧಿ ಚೌಕ್‌ನಿಂದ ದೇವಕಿನಂದನ್ ಚೌಕ್‌ಗೆ ಕೊಂಡೊಯ್ಯಲಾಯಿತು, ಅಲ್ಲಿ ವೇದಿಕೆಯನ್ನು ನಿರ್ಮಿಸಲಾಗಿತ್ತು ಎಂದು ಬಿಲಾಸ್‌ಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಪಾಂಡೆ ಹೇಳಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ಕುಮಾರಿ ಸೆಲ್ಜಾ ಅವರು ರ್ಯಾಲಿಯನ್ನು ಉದ್ಘಾಟಿಸಿ ರಾಯಪುರಕ್ಕೆ ಮರಳಿದರು ಎಂದು ಅವರು ಹೇಳಿದರು.
ಸಂಜೆಯ ವೇಳೆಗೆ ಯಾತ್ರೆಯು ತನ್ನ ಗಮ್ಯಸ್ಥಾನವನ್ನು ತಲುಪುತ್ತಿದ್ದಂತೆ, ಪಕ್ಷದ ಹಿರಿಯ ಮುಖಂಡರ ಜೊತೆಗೆ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ವೇದಿಕೆಯ ಮೇಲೆ ಏರಿದರು. ರಾಜ್ಯಾಧ್ಯಕ್ಷ ಮಾರ್ಕಂ, ಪಕ್ಷದ ಶಾಸಕರು, ಜಿಲ್ಲಾ ಘಟಕದ ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು ಎಂದು ಅವರು ತಿಳಿಸಿದರು.
ಇದೇ ವೇಳೆ ಮತ್ತೋರ್ವ ಶಾಸಕಿ ರಶ್ಮಿ ಸಿಂಗ್, ಅವರ ಪತಿ ಆಶಿಶ್ ಸಿಂಗ್ ಠಾಕೂರ್ ಮತ್ತು ಇತರ ಕೆಲವು ನಾಯಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ನಡೆದ ತಕ್ಷಣ ಆರೋಗ್ಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.
ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೋಹನ್ ಮಾರ್ಕಮ್ ಕೂಡ ವೇದಿಕೆಯಿಂದ ಕೆಳಗೆ ಬಿದ್ದಿದ್ದಾರೆ.

ಪ್ರಮುಖ ಸುದ್ದಿ :-   ತೃಣಮೂಲ ಬಂಡಾಯ ಸಂಸದರನ್ನು ಯಾಕೆ ಆಹ್ವಾನಿಸಿದ್ದೀರಿ ? : ಸರ್ವಪಕ್ಷ ಸಭೆಗೆ ಕೆಲಕಾಲ ಬಹಿಷ್ಕರಿಸಿದ ವಿಪಕ್ಷಗಳು

ಕಳೆದ ತಿಂಗಳು ಸೂರತ್ ನ್ಯಾಯಾಲಯವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಸಾಬೀತಾದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ರಾಹುಲ್‌ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಹಾಗೂ 30 ದಿನಗಳಲ್ಲಿ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಜಾಮೀನು ನೀಡಲಾಯಿತು.
ಇಂದು, ಸೋಮವಾರ ಕಾಂಗ್ರೆಸ್ ನಾಯಕ ಸೆಷನ್ಸ್ ನ್ಯಾಯಾಲಯದಲ್ಲಿ ತನ್ನ ಅಪರಾಧದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸೂರತ್ ತಲುಪಲಿದ್ದಾರೆ. ಇಂದು, ಸೋಮವಾರ ಮಧ್ಯಾಹ್ನ 2 ಗಂಟೆಗೆ ರಾಹುಲ್ ಗಾಂಧಿ ಸೂರತ್ ತಲುಪಲಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಮತ್ತು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರೊಂದಿಗೆ ತೆರಳಲಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗಹ್ಲೋಟ್ ಮತ್ತು ಕಾಂಗ್ರೆಸ್ ರಾಜ್ಯಸಭಾ ಸಂಸದ ಕೆಸಿ ವೇಣುಗೋಪಾಲ್ ಕೂಡ ಉಪಸ್ಥಿತರಿರುವ ನಿರೀಕ್ಷೆಯಿದೆ.

ಪ್ರಮುಖ ಸುದ್ದಿ :-   ಸೋನಂ ವಾಂಗ್ಚುಕ್ ಉಪವಾಸ ಅಂತ್ಯಗೊಳಿಸಲು ಸಿದ್ಧ ಎಂದ ಪತ್ನಿ ; ಆದರೆ ಅದಕ್ಕೆ ಎರಡು ಷರತ್ತುಗಳು...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement