ನವದೆಹಲಿ: ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ 53 ಗಣ್ಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಪದ್ಮ’ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಿದರು.
ಕರ್ನಾಟಕದವರಾದ ಸಾಹಿತ್ಯಕ್ಕಾಗಿ ಎಸ್.ಎಲ್.ಭೈರಪ್ಪ, ಸಾಮಾಜಿಕ ಸೇವೆಗಾಗಿ ಡಾ.ಸುಧಾಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಮಾಜವಾದಿ ಪಕ್ಷದ ದಿವಂಗತ ಮುಲಯಾಂ ಸಿಂಗ್ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಿದರಿ ಕಲೆಯಲ್ಲಿ ಅನೇಕ ಹೊಸ ಮಾದರಿಗಳು ಮತ್ತು ವಿನ್ಯಾಸಗಳನ್ನು ಪರಿಚಯಿಸಲು ಹೆಸರುವಾಸಿಯಾದ ಬೀದರಿನ ಶಾ ರಶೀದ್ ಅಹ್ಮದ್ ಕ್ವಾದರಿ, ಕೊಡಗಿನ ಉಮ್ಮತತ್ ಜಾನಪದ ನೃತ್ಯ ಕಲೆಯ ಪ್ರತಿಪಾದಕಿ ಐಮುಡಿಯಂಡ ರಾಣಿ ಮಾಚಯ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್ಗಾಗಿ ‘ಭಾರತದ ರಾಗಿ ಮನುಷ್ಯ’ ಎಂದು ಕರೆಯಲ್ಪಡುವ ಡಾ. ಖಾದರ್ ವಲ್ಲಿ ದೂದೇಕುಲ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಮೂವರಿಗೆ ಪದ್ಮವಿಭೂಷಣ, ಐವರಿಗೆ ಪದ್ಮಭೂಷಣ ಹಾಗೂ 45 ಗಣ್ಯರಿಗೆ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು
ಜನವರಿ 25 ರಂದು 106 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿತ್ತು. ಕಳೆದ ಮಾರ್ಚ್ ತಿಂಗಳಲ್ಲಿ 53 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಕೇಂದ್ರ ಸಚಿವರು ಮತ್ತು ಅತಿಥಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ