ತುಮಕೂರು: ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಪಕ್ಷದಲ್ಲಿ ಬಂಡಾಯ ಸ್ಫೋಟಗೊಂಡಿದೆ. ತುಮಕೂರು ನಗರ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ತಮ್ಮ ಅಳಿಯ ಎಸ್.ರಫೀಕ್ ಅಹ್ಮದ್ಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಮಾಜಿ ಶಾಸಕ ಶಫಿ ಅಹ್ಮದ್ ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಯುವ ಮುಖಂಡ ಇಕ್ಬಾಲ್ ಅಹ್ಮದ್ಗೆ ಟಿಕೆಟ್ ನೀಡಿದ ಹೈಕಮಾಂಡ್ ನಿರ್ಧಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಅಸಮರ್ಥ ವ್ಯಕ್ತಿಗೆ ಟಿಕೆಟ್ ನೀಡಲಾಗಿದೆ ಎಂದು ಕಿಡಿಕಾರಿದ್ದಾರೆ.
ಕಳೆದ ನಾಲ್ಕು ದಶಕಗಳಿಂದ ಮಾಜಿ ಶಾಸಕ ಶಫಿ ಅಹ್ಮದ್ ಅವರ ಕುಟುಂಬಕ್ಕೆ ಮಣೆ ಹಾಕಲಾಗಿತ್ತು. ಅವರು ಎರಡು ಬಾರಿ ಹಾಗೂ ಅವರ ಅಳಿಯ ರಫಿಕ್ ಅಹ್ಮದ್ ಒಂದು ಬಾರಿ ಶಾಸಕರಾಗಿದ್ದರು. ಈಗ ಅವರ ಕುಟುಂಬ ಬಿಟ್ಟು ಹೊರಗಿನ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಶಫಿ ಅಹ್ಮದ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ