ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಶನಿವಾರ ತಮ್ಮ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದ್ದು, ಕಾನೂನು ಸಚಿವ ಕಿರಣ್ ರಿಜಿಜು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು-ಶ್ರೀನಗರ ಹೆದ್ದಾರಿಯ ರಾಂಬನ್ ಬಳಿ ಸಂಪೂರ್ಣ ಲೋಡ್ ಆಗಿದ್ದ ಟ್ರಕ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಕಾನೂನು ಸೇವಾ ಶಿಬಿರದಲ್ಲಿ ಪಾಲ್ಗೊಳ್ಳಲು ಉಧಂಪುರಕ್ಕೆ ಬಂದಿದ್ದರು.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಜಮ್ಮು ಮತ್ತು ಕಾಶ್ಮೀರದ ಬನಿಹಾಲ್ ಬಳಿ ಸಂಪೂರ್ಣ ಲೋಡ್ ಆಗಿದ್ದ ಟ್ರಕ್ ಅವರ ಬುಲೆಟ್ ಪ್ರೂಫ್ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿಗೆ ಸ್ವಲ್ಪ ಹಾನಿಯಾಗಿದೆ. ಘಟನೆಯ ವೀಡಿಯೋದಲ್ಲಿ ಸಚಿವ ಕಿರಣ ರಿಜಿಜು ಅವರ ಭದ್ರತಾ ಸಿಬ್ಬಂದಿ ಾವರ ಕಪ್ಪು ಸ್ಕಾರ್ಪಿಯೋ ಕಡೆಗೆ ಓಡುತ್ತಿರುವುದನ್ನು ತೋರಿಸಿದೆ.
ಅಪಘಾತದ ಸ್ವಲ್ಪ ಸಮಯದ ಮೊದಲು, ರಿಜಿಜು ಅವರು ಜಮ್ಮು ಮತ್ತು ಕಾಶ್ಮೀರದ ಡಾ ಶ್ಯಾಮ ಪ್ರಸಾದ್ ಮುಖರ್ಜಿ ಸುರಂಗದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಹೆದ್ದಾರಿ ಸುಧಾರಣೆಗೆ ಬೃಹತ್ ಕಾಮಗಾರಿ ನಡೆಯುತ್ತಿದೆ ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ