ರಾಮನಗರ : ಸೋಮವಾರ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರದ ಕೇತಗಾನಹಳ್ಳಿಯಲ್ಲಿ ಇಂದು, ಸೋಮವಾರ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ ಅವರು, ಜೆಡಿಎಸ್ ಮುಳುಗಿಸಲು ಕಾಂಗ್ರೆಸ್ನವರು ನಮ್ಮ ಶಾಸಕರನ್ನ ಕರೆದುಕೊಂಡು ಹೋದರು. ಇದೀಗ ಕಾಂಗ್ರೆಸ್ನಿಂದಲೇ ಜೆಡಿಎಸ್ಗೆ ಬರುತ್ತಿದ್ದಾರೆ. ರಘು ಆಚಾರ್ ನಮ್ಮ ಜೊತೆ ಮಾತನಾಡಿದ್ದಾರೆ. ಜೆಡಿಎಸ್ ಸೇರುವುದಾಗಿ ಅವರೇ ಹೇಳಿದ್ದಾರೆ ಕಾಂಗ್ರೆಸ್ ಪಕ್ಷದ 15 ಮುಖಂಡರು ಜೆಡಿಎಸ್ಗೆ ಬರುತ್ತಿದ್ದಾರ ಎಂದರು.
ನಂದಿನಿ ಮತ್ತು ಅಮುಲ್ ವಿವಾದ ಕುರಿತು ಪ್ರತಿಕ್ರಿಯಿಸಿದ ಅವರು, ಕರ್ನಾಟಕವನ್ನ ಗುಜರಾತ್ ಮಾಡಲು ಹೊರಟಿದ್ದಾರೆ. ರೈತರ ಬದುಕಿನ ಜೊತೆ ಆಟವಾಡುತ್ತಿದ್ದಾರೆ. ಗುಜರಾತ್ ನಾಯಕರ ಮೆಚ್ಚಿಸಲು ಕರ್ನಾಟಕದ ಬಿಜೆಪಿ ನಾಯಕರು ಮುಂದಾಗಿದ್ದಾರೆ. ಎಂದು ವಾಗ್ದಾಳಿ ನಡೆಸಿದರು.
ನಿಮ್ಮ ಕಾಮೆಂಟ್ ಬರೆಯಿರಿ