ಬಿಜೆಪಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ರಾಜೀನಾಮೆ ಪತ್ರ ವೈರಲ್, ಸ್ಪಷ್ಟನೆ ನೀಡಿದ ಶೆಟ್ಟರ್

posted in: ರಾಜ್ಯ | 0

ಹುಬ್ಬಳ್ಳಿ: ಕ್ಷೇತ್ರ ಬಿಟ್ಟುಕೊಡುವಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಅವರಿಗೆ ಬಿಜೆಪಿ ಹೈಕಮಾಂಡ್ ದೂರವಾಣಿ ಕರೆ ಮಾಡಿದ ಬೆನ್ನಲ್ಲೇ ಅವರ ಹೆಸರಿನಲ್ಲಿ ರಾಜೀನಾಮೆ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಪತ್ರದ ಬಗ್ಗೆ ಸ್ಪಷ್ಟನೆ ನೀಡಿದ ಜಗದೀಶ ಶೆಟ್ಟರ್, ನನ್ನ ಹೆಸರಿನಲ್ಲಿ ವೈರಲ್ ಆಗುತ್ತಿರುವ ರಾಜೀನಾಮೆ ಪತ್ರ ನಕಲಿ ಎಂದು ಹೇಳಿದ್ದಾರೆ.
ನಾನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂಬುದು ಅಪ್ಪಟ ಸುಳ್ಳು. ನನ್ನ ಲೆಟರ್ ಹೆಡ್‌ ಹೆಸರಿನಲ್ಲಿ ಯಾರೋ ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರಿಗೆ ನಾನು ಯಾವುದೇ ಪತ್ರ ಬರೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಡ್ಡಾ ಅವರಿಗೆ ಪತ್ರ ಬರೆಯುವುದಾದರೆ ಇಂಗ್ಲಿಷ್‌ನಲ್ಲಿ ಬರೆಯುತ್ತಾರೆ. ಆದರೆ ವೈರಲ್‌ ಆದ ಪತ್ರ ಕನ್ನಡದಲ್ಲಿ ಇದೆ. ಆಗಲೇ ಇದನ್ನು ನಕಲಿ ಎಂದು ಅರ್ಥಮಾಡಿಕೊಳ್ಳಬೇಕು.. ಮೊನ್ನೆ ನಕಲಿ ಅಭ್ಯರ್ಥಿಗಳ ಹೆಸರು ಹಾಕಿ ವೈರಲ್ ಮಾಡಿದ್ದರು. ಈಗ ನಕಲಿ ಪತ್ರ ವೈರಲ್ ಆಗಿದೆ, ಇದೆಲ್ಲ ಸುಳ್ಳು ಎಂದು ಹೇಳಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ..?

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement