ಶಿವಮೊಗ್ಗ: ದಾಖಲೆ ಇಲ್ಲದ 5.83 ಕೋಟಿ ರೂ.ಮೌಲ್ಯದ ಚಿನ್ನದ ಪೊಲೀಸರ ವಶಕ್ಕೆ

ಶಿವಮೊಗ್ಗ: ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುತ್ತಿರುವ ಪೊಲೀಸರು ಕಾರ್ಯಾಚರಣೆ ನಡೆಸಿ ಸೂಕ್ತ ದಾಖಲೆಗಳಿಲ್ಲದೇ ಸಂಗ್ರಹಿಸಿಟ್ಟಿದ್ದ 5.83 ಕೋಟಿ ಮೌಲ್ಯದ 9 ಕೆಜಿ 565 ಗ್ರಾಂ ಚಿನ್ನ ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗದ ಗಾಂಧಿ ಬಜಾರಿನ‌ ಎಲೆರೇವಣ್ಣನ ಕೇರಿಯಲ್ಲಿರುವ ಚಿನ್ನದ ಅಂಗಡಿ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಚಿನ್ನದ ಅಂಗಡಿಯಲ್ಲಿ ದಾಳಿ ಮಾಡಿ ಕೋಟ್ಯಾಂತರ ರೂ ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಸೂಚನೆಯಂತೆ ಕೋಟೆ ಪೊಲೀಸರ ದಾಳಿ ಮಾಡಿದ್ದಾರೆ.
ದಾಖಲೆಯಿಲ್ಲದ ಹಣ ಪತ್ತೆ:
ಜಿಲ್ಲೆಯಲ್ಲಿ ವಿವಿಧ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದು, ಜಿಲ್ಲೆಯ ವಿವಿಧ ಚೆಕ್ ಪೋಸ್ಟ್ ನಲ್ಲಿ ಸುಮಾರು 30. 64 ಲಕ್ಷ ರೂ.ವಶಪಡಿಸಿಕೊಂಡಿದ್ದಾರೆ. ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 27.60 ಲಕ್ಷ ರೂ ವಶ ಮಾಡಿದ್ದು, ಶಿಕಾರಿಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದ 1.79 ಲಕ್ಷ ರೂ., ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.25 ಲಕ್ಷ ರೂ ವಶಕ್ಕೆ ಪಡೆದಿದ್ದಾರೆ.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement