ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಇಂದು ರಾತ್ರಿ ಬಿಡುಗಡೆಯಾಗಬಹುದು, ಜಗದೀಶ್ ಶೆಟ್ಟರಗೆ ಟಿಕೆಟ್‌ ಸಿಗಬಹುದು : ಯಡಿಯೂರಪ್ಪ

ಬೆಂಗಳೂರು: ಬಿಜೆಪಿ ನಿನ್ನೆ 189 ಸ್ಥಾನಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 125 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು.
“ನಿನ್ನೆ ಘೋಷಣೆಯಾದ 189 ಸ್ಥಾನಗಳಲ್ಲಿ 52 ಹೊಸ ಮುಖಗಳನ್ನು ಆಯ್ಕೆ ಮಾಡಲಾಗಿದೆ. ನಿನ್ನೆ ಘೋಷಣೆಯಾದ 189 ಸ್ಥಾನಗಳಲ್ಲಿ ನಾವು ಕನಿಷ್ಠ 125 ರಿಂದ 130 ಸ್ಥಾನಗಳನ್ನು ಗೆಲ್ಲುತ್ತೇವೆ. ಘೋಷಣೆಯಿಂದ ನಮಗೆ ಸಂತೋಷವಾಗಿದೆ. ಕರ್ನಾಟಕದಲ್ಲಿ ಸರ್ಕಾರ ರಚಿಸುತ್ತೇವೆ. ಇಂದು ರಾತ್ರಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ಕೆ.ಎಸ್.ಈಶ್ವರಪ್ಪ ಚುನಾವಣಾ ರಾಜಕೀಯ ತ್ಯಜಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿ, ಚುನಾವಣೆಗೆ ಸ್ಪರ್ಧಿಸದಿರುವ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಅವರು ಸ್ವಇಚ್ಛೆಯಿಂದ ಪತ್ರ ಬರೆದಿದ್ದಾರೆ. ಪಕ್ಷಕ್ಕಾಗಿ ದುಡಿಯುವುದಾಗಿ ಈಶ್ವರಪ್ಪ ಸ್ವ ಇಚ್ಛೆಯಿಂದ ಪಕ್ಷದ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಅವರಿಗೆ ಸ್ಪರ್ಧಿಸುವ ಇಚ್ಛೆ ಇಲ್ಲ ಎಂದರು.

ಪ್ರಮುಖ ಸುದ್ದಿ :-   ರಾಜ್ಯದ ಲೋಕಸಭೆ ಚುನಾವಣೆ 2ನೇ ಹಂತದಲ್ಲಿ ಶೇ.70.03 ಮತದಾನ; ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ ? ಇಲ್ಲಿದೆ ವಿವರ..

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಆರು ಬಾರಿ ಬಿಜೆಪಿ ಶಾಸಕರಾಗಿರುವ ಜಗದೀಶ್ ಶೆಟ್ಟರ್ ಅವರು ನಿನ್ನೆ ಬಿಡುಗಡೆ ಮಾಡಿದ ಮೊದಲ ಪಟ್ಟಿಯ ಮೊದಲ ಪಟ್ಟಿಯಲ್ಲಿ ಹೆಸರು ಕಾಣೆಯಾಗಿರುವ ಬಗ್ಗೆ ಮಾತನಾಡಿದ ಯಡಿಯೂರಪ್ಪ, ಎರಡನೇ ಪಟ್ಟಿಯಲ್ಲಿ ಅವರ ಹೆಸರು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದರು. ಶೇ.99 ರಷ್ಟು ಜಗದೀಶ್ ಶೆಟ್ಟರ್ ಅವರಿಗೆ ಚುನಾವಣೆ ಟಿಕೆಟ್ ನೀಡಲಾಗುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದರು.

ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ 224 ಸ್ಥಾನಗಳ ಪೈಕಿ 189 ಸ್ಥಾನಗಳಿಗೆ ಬಿಜೆಪಿ ಮಂಗಳವಾರ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 52 ಹೊಸ ಅಭ್ಯರ್ಥಿಗಳು ಟಿಕೆಟ್ ಪಡೆದಿದ್ದಾರೆ. 189 ಅಭ್ಯರ್ಥಿಗಳಲ್ಲಿ 52 ಹೊಸ ಮುಖಗಳು, 8 ಮಹಿಳೆಯರು, 9 ವೈದ್ಯರು, 5 ವಕೀಲರು, ಒಬ್ಬ ನಿವೃತ್ತ ಐಪಿಎಸ್ ಅಧಿಕಾರಿ, ಒಬ್ಬ ಐಎಎಸ್‌ ಅಧಿಕಾರಿ, ಮೂವರು ನಿವೃತ್ತ ಸರ್ಕಾರಿ ನೌಕರರು ಮತ್ತು 8 ಸಾಮಾಜಿಕ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರನಿಗೂ ಟಿಕೆಟ್ ನೀಡಲಾಗಿದೆ.
ಮೊದಲ ಪಟ್ಟಿಯಲ್ಲಿ ಹಿಂದುಳಿದ ವರ್ಗಗಳಿಗೆ-32, ಲಿಂಗಾಯತ-51, ಒಕ್ಕಲಿಂಗ-41, ಕುರುಬ-7, ಪರಿಶಿಷ್ಟ ಜಾತಿ-30, ಪರಿಶಿಷ್ಟ ಪಂಗಡ-16 ಮಂದಿಗೆ ಟಿಕೆಟ್ ನೀಡಲಾಗಿದೆ.
ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

ಪ್ರಮುಖ ಸುದ್ದಿ :-   ನಾಳೆ (ಮೇ 9) ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಪ್ರಕಟ ; ಫಲಿತಾಂಶ ಎಲ್ಲಿ ನೋಡುವುದು..? ಇಲ್ಲಿದೆ ಮಾಹಿತಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement