ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಬಿಜೆಪಿಗೆ ಗುಡ್‌ ಬೈ

 ಬೆಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆಗೆ ಟಿಕೆಟ್​ ತಪ್ಪಿದ್ದಕ್ಕೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಎಂ.ಪಿ. ಕುಮಾರಸ್ವಾಮಿ ಅವರು ಮೂಡಿಗೆರೆಯಿಂದ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದರೆ ಅವರ ಬಗ್ಗೆ ಕ್ಷೇತ್ರದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೀಸಲು ಕ್ಷೇತ್ರದ ಟಿಕೆಟ್‌ ಹಾಲಿ ಶಾಸಕ ಹಾಗೂ ಮೂರು ಬಾರಿ ಗೆದ್ದ ಎಂ.ಪಿ.ಕುಮಾರಸ್ವಾಮಿಗೆ ಟಿಕೆಟ್‌ ನೀಡದಂತೆ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಎಂದು ಒತ್ತಾಯಿಸಿದ್ದರು. ಅಲ್ಲದೇ ಹೈಕಮಾಂಡಿಗೆ ಟಿಕೆಟ್​ ನೀಡಬೇಡಿ ಎಂದು ಪತ್ರ ಹಾಗೂ ಇಮೇಲ್​ ಕಳುಹಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್‌ ಈ ಬಾರಿ ಎಂ.ಪಿ.ಕುಮಾರಸ್ವಾಮಿಗೆ ಟಿಕೆಟ್‌ ನೀಡಲು ನಿರಾಕರಿಸಿದೆ. ಎರಡನೇ ಪಟ್ಟಿಯಲ್ಲಿ ಅವರನ್ನು ಬದಲಾಯಿಸಿ ದೀಪಕ್ ದೊಡ್ಡಯ್ಯ ಎಂಬವರಿಗೆ ಟಿಕೆಟ್​ ಘೋಷಣೆ ಮಾಡಿದೆ. ಇದರಿಂದ ಅಸಮಧಾನಗೊಂಡ ಎಂಪಿ ಕುಮಾರಸ್ವಾಮಿ ಅವರು ಇಂದು, ಗುರುವಾರ (ಏಪ್ರಿಲ್ 13) ಶಾಸಕ ಸ್ಥಾನದ ಜೊತೆಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement