ಆಸ್ಪತ್ರೆಯಲ್ಲಿ ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿ 2 ವರ್ಷಗಳ ನಂತರ ಮನೆ ಮುಂದೆ ಪ್ರತ್ಯಕ್ಷ..!!

ಧಾರ್ (ಮಧ್ಯಪ್ರದೇಶ) : ಆಸ್ಪತ್ರೆಯಲ್ಲಿ ಕೋವಿಡ್-19 ನಿಂದಾಗಿ “ಮೃತ” ಎಂದು ಘೋಷಿಸಿದ ವ್ಯಕ್ತಿಯೊಬ್ಬನ ಕುಟುಂಬ ಸದಸ್ಯರು ಆತನ ಅಂತ್ಯಕ್ರಿಯೆ ನೆರವೇರಿಸಿದ ಎರಡು ವರ್ಷಗಳ ನಂತರ ಆತ ಮನೆಗೆ ಮರಳಿದ್ದಾನೆ. ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ.
ಕಮಲೇಶ ಪಾಟಿದಾರ್ (35) ಎಂಬ ವ್ಯಕ್ತಿ ತಮ್ಮ ಕುಟುಂಬವರು ತಮ್ಮ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದ ಸುಮಾರು ಎರಡು ವರ್ಷಗಳ ನಂತರ ಶನಿವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಕರೋಡ್ಕಳ ಗ್ರಾಮದ ತನ್ನ ತಾಯಿಯ ಚಿಕ್ಕಮ್ಮನ ಮನೆಯ ಬಾಗಿಲು ಮುಂದೆ ಪ್ರತ್ಯಕ್ಷವಾಗಿದ್ದಾನೆ. ಆತ ತಟ್ಟಿದಾಗ ಕುಟುಂಬ ಸದಸ್ಯರು ಆಶ್ಚರ್ಯಚಕಿತರಾದರು.
ಕಮಲೇಶ ಪಾಟಿದಾರ್ ಎರಡನೇ ಕೋವಿಡ್‌-19 ಅಲೆಯ ಸಮಯದಲ್ಲಿ ಸೋಂಕಿಗೆ ಒಳಗಾಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ನಂತರ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಆಸ್ಪತ್ರೆಯು “ದೇಹ”ವನ್ನು ಅವರಿಗೆ ಹಸ್ತಾಂತರಿಸಿದ ನಂತರ, ಕುಟುಂಬ ಸದಸ್ಯರು ಮೃತದೇಹದ ಅಂತ್ಯಕ್ರಿಯೆ ನಡೆಸಿದರು ಎಂದು ಅವರ ಸೋದರಸಂಬಂಧಿ ಮುಖೇಶ ಪಾಟಿದಾರ ಮಾಧ್ಯಮದವರಿಗೆ ತಿಳಿಸಿದ್ದಾರೆ.
“ಈಗ, ಅವರು ಮನೆಗೆ ಮರಳಿದ್ದಾರೆ ಆದರೆ ಅವರು ಎರಡು ವರ್ಷಗಳ ಕಾಲ ಎಲ್ಲಿ ಉಳಿದುಕೊಂಡಿದ್ದರು ಎಂಬುದರ ಬಗ್ಗೆ ಏನನ್ನೂ ಬಹಿರಂಗಪಡಿಸಿಲ್ಲ ಎಂದು ಮುಖೇಶ ಪಾಟಿದಾರ ಹೇಳಿದರು.
ಕುಟುಂಬ ಸದಸ್ಯರ ಪ್ರಕಾರ, ಕಮಲೇಶ ಪಾಟಿದಾರ್ ಅವರು 2021 ರಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದರು ಮತ್ತು ವಡೋದರಾ (ಗುಜರಾತ್) ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಕಾನ್ವಾನ್ ಪೊಲೀಸ್ ಠಾಣೆಯ ಉಸ್ತುವಾರಿ ರಾಮ್ ಸಿಂಗ್ ರಾಥೋಡ್ ಹೇಳಿದ್ದಾರೆ.
ಅವರು ಕೋವಿಡ್‌-19 ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು, ನಂತರ ಕುಟುಂಬ ಸದಸ್ಯರು ವಡೋದರಾದಲ್ಲಿ ಆಸ್ಪತ್ರೆ ನೀಡಿದ ಮೃತದೇಹದ ಅಂತ್ಯಕ್ರಿಯೆ ನೆರವೇರಿಸಿದರು ಮತ್ತು ನಂತರ ತಮ್ಮ ಗ್ರಾಮಕ್ಕೆ ಮರಳಿದರು ಎಂದು ಅವರು ಹೇಳಿದ್ದಾರೆ. ಶನಿವಾರ ಕಮಲೇಶ ಪಾಟಿದಾರ ಮನೆಗೆ ಹಿಂದಿರುಗಿದಾಗಲೇ ಅವರು ಬದುಕಿರುವುದು ಕುಟುಂಬ ಸದಸ್ಯರಿಗೆ ಗೊತ್ತಾಯಿತು ಎಂದು ರಾಥೋಡ್ ಹೇಳಿದರು.
ಕಮಲೇಶ ಪಾಟಿದಾರ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ವಿಷಯ ಇನ್ನಷ್ಟು ಸ್ಪಷ್ಟವಾಗಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯಕುಮಾರಗೆ ಕಪಾಳಮೋಕ್ಷ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement