ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದ ತಕ್ಷಣವೇ ಜಗದೀಶ ಶೆಟ್ಟರಗೆ ಟಿಕೆಟ್‌ ನೀಡಿದ ಕಾಂಗ್ರೆಸ್‌….!

ಬೆಂಗಳೂರು : ಬಿಜೆಪಿಗೆ (BJP) ರಾಜೀನಾಮೆ ನೀಡಿ ಇಂದು, ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್‌ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದ ಟಿಕೆಟ್‌ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮುಂದಿನ ವಿಧಾನ ಸಭೆ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್‌ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕಿಳಿಯಲಿದ್ದಾರೆ. ಜಗದೀಶ ಶೆಟ್ಟರ ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವ ಪಡೆದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಬಿಫಾರಂ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್‌ ಸೇರ್ಪಡೆಯಾದ ಬಳಿಕ ಕೆಪಿಸಿಸ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಾತನಾಡಿ, ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರ್ಪಡೆಯಾಗಿದ್ದೇನೆ ಇದರಿಂದ ಒಂದಷ್ಟು ಜನರಿಗೆ ಶಾಕ್‌ ಆಗಿದೆ. ಮುಖ್ಯಮಂತ್ರಿಯಾಗಿ, ಪ್ರತಿಪಕ್ಷದ ನಾಯಕನಾಗಿ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡಿದವರು ಯಾಕೆ ಬಿಜೆಪಿ ಬಿಡುತ್ತಿದ್ದಾರೆ ಎಂಬುದು ಚರ್ಚೆಗೆ ಗ್ರಾಸವಾಗುತ್ತಿದೆ. ಬಿಜೆಪಿ ಕೆಲ ನಾಯಕರು ನನ್ನನ್ನು ಹೆಚ್ಚು ಕಡೆಗಣನೆ ಮಾಡಿದ್ದರಿಂದ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಎಂದು ಅವರು ಹೇಳಿದ್ದಾರೆ.
ಪಕ್ಷದಿಂದ ಹೊರ ಹಾಕಲು ವ್ಯವಸ್ಥಿತವಾಗಿ ಷಡ್ಯಂತ್ರ ನಡೆಯಿತು. ಬಿಜೆಪಿಯ ಯಶಸ್ಸು ಕೆಲವು ವ್ಯಕ್ತಿಗಳಿಗೆ ಮಾತ್ರ ಕೇಂದ್ರೀಕೃತವಾಗಿದೆ. ಮತ್ತೊಂದು ಬಾರಿ ಗೆದ್ದರೆ ನಾಯಕನಾಗುವೆ ಎಂದು ವ್ಯವಸ್ಥಿತವಾಗಿ ನನ್ನನ್ನು ಹೊರ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement