ಕಾರು- ತೂಫಾನ್ ನಡುವೆ ಡಿಕ್ಕಿ; ಮಗು ಸೇರಿ ನಾಲ್ವರು ಸಾವು

ಮಂಗಳೂರು: ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಕಾರು ಬೇಳೂರಿನಿಂದ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ತೂಫಾನ್ ವಾಹನಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮಗು, ಓರ್ವ ಮಹಿಳೆ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ತೂಫಾನ್​​ನಲ್ಲಿ ಪ್ರಯಾಣಿಸುತ್ತಿದ್ದವರಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ. ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ..| ಕುಮಟಾ : ಅಘನಾಶಿನಿ ನದಿಗೆ ಅಡ್ಡವಾಗಿ ನಿರ್ಮಾಣವಾಗುತ್ತಿದ್ದ ಸೇತುವೆಯ ಸ್ಲ್ಯಾಬ್‌ ಕುಸಿತ

ನಿಮ್ಮ ಕಾಮೆಂಟ್ ಬರೆಯಿರಿ

advertisement