ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಐದನೇ ಪಟ್ಟಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಬೊಮ್ಮಾಯಿ ಸ್ಪರ್ಧಿಸುವ ಶಿಗ್ಗಾಂವಿ ಮತ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿರುವ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷವು ಈ ಮೊದಲು ಮಹಮ್ಮದ್ ಯೂಸುಫ್ ಸವಣೂರ ಅವರಿಗೆ ಟಿಕೆಟ್ ಘೋಷಣೆ ಮಾಡಿತ್ತು. ಆದರೆ ಈಗ ದಿಢೀರ್ ಅವರ ಹೆಸರನ್ನು ಬದಲಾಯಿಸಿ ಯಾಸೀರ್ ಅಹಮದ್ ಖಾನ್ ಪಠಾಣ್ ಎಂಬವರಿಗೆ ಘೋಷಣೆ ಮಾಡಿದೆ. 4 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಶಿಗ್ಗಾವಿ-ಯಾಸೀರ್ ಅಹಮದ್ ಖಾನ್ ಪಠಾಣ್
ಕೆಆರ್ ಪುರಂ-ಡಿ.ಕೆ.ಮೋಹನ್ ಬಾಬು
ಪುಲಕೇಶಿ ನಗರ- ಎ.ಸಿ.ಶ್ರೀನಿವಾಸ
ಮುಳಬಾಗಿಲು-ಬಿ.ಸಿ. ಮುದ್ದು ಗಂಗಾಧರ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ