ಕರ್ನಾಟಕ ವಿಧಾನಸಭೆ ಚುನಾವಣೆ : ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆ, ಈಶ್ವರಪ್ಪ ಕುಟುಂಬಕ್ಕೆ ಕೈತಪ್ಪಿದ ಟಿಕೆಟ್

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಬುಧವಾರ ಬಿಡುಗಡೆಯಾಗಿದೆ. ಮಾಜಿ ಸಚಿವ ಹಾಗೂ ಕೆ.ಎಸ್. ಈಶ್ವರಪ್ಪ ಕುಟುಂಬಕ್ಕೆ ಟಿಕೆಟ್ ಕೈತಪ್ಪಿದೆ.
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಚನ್ನಬಸಪ್ಪ ಎಂಬವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ರಾಯಚೂರು ಜಿಲ್ಲೆ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಬಿ.ವಿ. ನಾಯಕ ಅವರಿಗೆ ಟಿಕೆಟ್‌ ನೀಡಲಾಗಿದೆ.
ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಕೆಲವು ದಿನಗಳ ಹಿಂದಷ್ಟೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು. ಆದರೆ ಪಕ್ಷದ ಪರ ಚುನಾವಣಾ ಪ್ರಚಾರ ಮಾಡುವುದಾಗಿ ಹೇಳಿದ್ದರು. ಹಾಲಿ ಶಾಸಕರಾಗಿರುವ ಈಶ್ವರಪ್ಪ ಅವರ ಪುತ್ರ ಕಾಂತೇಶ ಅವರಿಗೆ​​ಗೆ ಟಿಕೆಟ್​​ ದೊರೆಯಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಹೈಕಮಾಂಡ್‌ ಬೇರೆಯದ್ದೇ ಅಲೋಚನೆ ಮಾಡಿದ್ದು ಚನ್ನಬಸಪ್ಪ ಅವರಿಗೆ ಟಿಕೆಟ್‌ ನೀಡಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ ಇನ್ನಿಲ್ಲ

ನಿಮ್ಮ ಕಾಮೆಂಟ್ ಬರೆಯಿರಿ

advertisement