ಖಾನಾಪುರ: ವಾಹನ ಡಿಕ್ಕೆ ಹೊಡೆದು ಇಬ್ಬರು ಸಾವು, ಇಬ್ಬರಿಗೆ ಗಾಯ

ಬೆಳಗಾವಿ: ಗುರುವಾರ ಮಧ್ಯರಾತ್ರಿ ವಾಹನ ಹಾಯ್ದು ಇಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗೋದೊಳ್ಳಿ ಗ್ರಾಮದ ಬಳಿ ಸಂಭವಿಸಿದೆ.
ಗೋಧೋಳಿ ಗ್ರಾಮದ ಮಹಾಬಲೇಶ್ವರ ಶಿಂಧೆ( 65), ಪುಂಡಲೀಕ ರೇಡೇಕಾರ (72 ) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪುಂಡಲೀಕ ಅವರ ಹಿರಿಯ ಸಹೋದರ ಕೃಷ್ಣ ರೇಡೇಕರ (74) ಗಾಯಗೊಂಡು ಬೆಳಗಾವಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಜುನಾಥ (47) ಎಂಬವರು ಸಹ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಗೋದೊಳ್ಳಿ ಗ್ರಾಮದ ರೈತರು ತಮ್ಮ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿಗೆ ನೀರು ಹಾಯಿಸಲು ಹೊರಟಿದ್ದರು. ಆ ಸಂದರ್ಭದಲ್ಲಿ ವಾಹನ ಇವರಿಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಘಟನೆ ವಿವರ :
ಗೋಧೋಳಿ ಭಾಗದಲ್ಲಿ ಕರಡಿ ಸೇರಿದಂತೆ ಕಾಡುಪ್ರಾಣಿಗಳ ಓಡಾಟ ಹೆಚ್ಚಾಗಿದೆ. ಈ ಭಾಗದ ರೈತರಿಗೆ ರಾತ್ರಿ ವೇಳೆ ವಿದ್ಯುತ್ ಪೂರೈಕೆಗೆ ತೊಂದರೆಯಾಗಿದೆ. ಹೀಗಾಗಿ ಈ ಭಾಗದ ರೈತರು ಒಂದೆಡೆ ಸೇರಿ ರಾತ್ರಿ ವೇಳೆ ಹೊಲಗಳಿಗೆ ಹೋಗುತ್ತಾರೆ. ಅದೇ ರೀತಿ ಗುರುವಾರ ರಾತ್ರಿ ಐದಾರು ಜನ ರೈತರು ಒಂದೆಡೆ ಸೇರಿದ್ದರು. ರಾತ್ರಿ 12:00 ಗಂಟೆ ಸುಮಾರಿಗೆ ಜಮೀನಿನಲ್ಲಿ ಬೋರ್ ವೆಲ್ ಪೈಪ್ ಬದಲಾಯಿಸಿ ಹುಬ್ಬಳ್ಳಿ-ಗೋವಾ ಹೆದ್ದಾರಿಯಲ್ಲಿ ರಸ್ತೆ ಬದಿ ಕುಳಿತು ವೀಳ್ಯದೆಲೆ ತಿನ್ನುತ್ತಿದ್ದಾಗ ಗೋವಾದಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಬಿಳಿ ಬಣ್ಣದ ಅಪರಿಚಿತ ವಾಹನ ಇವರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಜಿ ಶಾಸಕ ಅರವಿಂದ ಪಾಟೀಲ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement