ಪಕ್ಷದ ಅಭ್ಯರ್ಥಿಯಿದ್ರೂ ಕಾಂಗ್ರೆಸ್ಸಿಗೆ ಬೆಂಬಲಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದ ಜೆಡಿಎಸ್‌ ಮುಖಂಡ ಭೋಜೇಗೌಡ…!

ಚಿಕ್ಕಮಗಳೂರು: ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಪ್ತ ಹಾಗೂ ಜೆಡಿಎಸ್ ಮುಖಂಡ ಎಸ್.ಎಲ್ ಭೋಜೇಗೌಡ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ ಎಂಬುದೀಗ ಚರ್ಚೆಗೆ ಗ್ರಾಸವಾಗಿದೆ.
ಆ ಮೂಲಕ ತಮ್ಮದೇ ಪಕ್ಷದ ಅಭ್ಯರ್ಥಿಗೆ ಶಾಕ್ ನೀಡಿದ್ದಾರೆ. ಎಸ್.ಎಲ್.ಭೋಜೇಗೌಡರು ಕಾಂಗ್ರೆಸ್ ಬೆಂಬಲಿಸುವಂತೆ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯ ಅವರಿಗೆ ಮತ ಹಾಕುವಂತೆ ಸಭೆಯೊಂದರಲ್ಲಿ ಮನವಿ ಮಾಡಿದ್ದಾರೆ.
ಭೋಜೇಗೌಡ ಅವರು ತಮ್ಮ ನಿವಾಸದಲ್ಲಿ ಬೆಂಬಲಿಗರೊಂದಿಗೆ ಮಾತನಾಡುತ್ತಿರುವ ವೈರಲ್‌ ವೀಡಿಯೊದಲ್ಲಿ ಜೆಡಿಎಸ್ ಅಭ್ಯರ್ಥಿ ತಿಮ್ಮಶೆಟ್ಟಿ ಕಣದಲ್ಲಿದ್ದರೂ ಭೊಜೇಗೌಡ ಕಾಂಗ್ರೆಸ್ ಗೆ ಬೆಂಬಲಿಸುವಂತೆ ಸೂಚಿಸಿದ್ದಾರೆ. ನೀವೆಲ್ಲಾ ಸೇರಿ ಕಾಂಗ್ರೆಸ್ ಗೆ ವೋಟ್ ಹಾಕಬೇಕು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕು. ಮೊದಲು ವೋಟ್ ಹಾಕಿ ಗೆಲ್ಲಿಸಿ, ಮಿಕ್ಕಿದ್ದು ಅಮೇಲೆ ನೋಡಿಕೊಳ್ಳೋಣ ಎಂದು ಬೋಜೇಗೌಡ ಹೇಳಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.
ಜೆಡಿಎಸ್ ಅಭ್ಯರ್ಥಿ ತಿಮ್ಮಶೆಟ್ಟಿ ಕಣದಲ್ಲಿದ್ದಾರೆ. ಆದರೂ ಭೊಜೇಗೌಡ ಅವರು ಕಾಂಗ್ರೆಸ್ ಗೆ ಬೆಂಬಲ ನೀಡಲು ಹೇಳುತ್ತಿರುವುದು ಜೆಡಿಎಸ್‌ನವರಿಗೆ ಶಾಕ್‌ ತಂದಿದೆ. ಎಸ್.ಎಲ್.ಭೋಜೇಗೌಡ ಅವರು ಎಚ್.ಡಿ‌ ಕುಮಾರಸ್ವಾಮಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಶಾಸಕ ಸಿ.ಟಿ.ರವಿ ಸೋಲಿಸಲು ಕಾಂಗ್ರೆಸ್- ಜೆಡಿಎಸ್ ಒಂದಾಗಿದ್ದಾರೆ ಎಂಬ ಆರೋಪದ ಮಧ್ಯೆ ಈ ವೀಡಿಯೊ ಹೊರಬಿದ್ದಿದೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement