ದೇಶದ ಅಗ್ರಮಾನ್ಯ ಕುಸ್ತಿಪಟುಗಳ ಪ್ರಭಟನೆ : ಭಾರತೀಯ ಕುಸ್ತಿ ಒಕ್ಕೂಟದ ಮೇ 7ರ ಚುನಾವಣೆ ಸ್ಥಗಿತ

ನವದೆಹಲಿ : ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಮೇ 7 ರಂದು ನಿಗದಿಯಾಗಿದ್ದ ಚುನಾವಣೆಯನ್ನು ಕ್ರೀಡಾ ಸಚಿವಾಲಯ ಸೋಮವಾರ ಸ್ಥಗಿತಗೊಳಿಸಿದೆ ಮತ್ತು 45 ದಿನಗಳಲ್ಲಿ ಚುನಾವಣೆ ನಡೆಸಲು ತಾತ್ಕಾಲಿಕ ಸಮಿತಿಯನ್ನು ರಚಿಸುವಂತೆ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಗೆ ಸೂಚಿಸಿದೆ.
ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಸೇರಿದಂತೆ ದೇಶದ ಉನ್ನತ ಕುಸ್ತಿಪಟುಗಳು ಭಾನುವಾರ ಇಲ್ಲಿ ತಮ್ಮ ಧರಣಿ ಪ್ರತಿಭಟನೆಯನ್ನು ಪುನರಾರಂಭಿಸಿದ ನಂತರ ಮತ್ತು ಡಬ್ಲ್ಯುಎಫ್‌ಐ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್‌ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ತನಿಖೆ ನಡೆಸಿದ ಮೇಲ್ವಿಚಾರಣಾ ಸಮಿತಿಯ ಫಲಿತಾಂಶಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕೆಂದು ಒತ್ತಾಯಿಸಿದ ನಂತರ ಸಚಿವಾಲಯದ ನಿರ್ಧಾರವು ಹೊರಬಿದ್ದಿದೆ.
ದೇಶದ ಉನ್ನತ ಕುಸ್ತಿಪಟುಗಳಿಂದ ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಬೆದರಿಕೆಯ ಆರೋಪದ ನಂತರ, ಸಚಿವಾಲಯವು ಡಬ್ಲುಎಫ್‌ಐ (WFI) ವ್ಯವಹಾರಗಳನ್ನು ನಡೆಸಲು ಮತ್ತು ವಿಷಯದ ಬಗ್ಗೆ ತನಿಖೆ ನಡೆಸಲು ಒಲಿಂಪಿಕ್ ಪದಕ ವಿಜೇತ ಬಾಕ್ಸರ್ ಎಂ.ಸಿ. ಮೇರಿ ಕೋಮ್ ನೇತೃತ್ವದಲ್ಲಿ ಆರು ಸದಸ್ಯರ ಉಸ್ತುವಾರಿ ಸಮಿತಿಯನ್ನು ರಚಿಸಿತ್ತು. ಮೇಲುಸ್ತುವಾರಿ ಸಮಿತಿಯು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ ನಂತರ “ಅಸ್ತಿತ್ವ ಕಳೆದುಕೊಂಡಿದೆ ಹಾಗೂ ಆಡಳಿತಾತ್ಮಕ ಅನೂರ್ಜಿತವಾಗಿದೆ. ಆದ್ದರಿಂದ, WFI ಯ ವ್ಯವಹಾರಗಳನ್ನು ನಿರ್ವಹಿಸಲು “ಸೂಕ್ತವಾದ ಮಧ್ಯಂತರ ವ್ಯವಸ್ಥೆಗಳನ್ನು” ಮಾಡಲು ಸಚಿವಾಲಯವು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ)ಅನ್ನು ಕೇಳಿದೆ.
ಆರೋಪಗಳ ಕುರಿತು ತನಿಖೆ ನಡೆಸಲು ಸರ್ಕಾರವು ಜನವರಿ 23 ರಂದು ರಚಿಸಿದ್ದ ಮೇಲ್ವಿಚಾರಣಾ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದೆ ಎಂದು ಸಚಿವಾಲಯ ಬಹಿರಂಗಪಡಿಸಿದೆ. ಆರು ಸದಸ್ಯರ ಮೇಲ್ವಿಚಾರಣಾ ಸಮಿತಿಯು ಕುಸ್ತಿಪಟುಗಳಾದ ಬಬಿತಾ ಫೋಗಟ್ ಮತ್ತು ಯೋಗೇಶ್ವರ್ ದತ್, ಮಾಜಿ ಬ್ಯಾಡ್ಮಿಂಟನ್ ಆಟಗಾರ್ತಿ ತೃಪ್ತಿ ಮುರ್ಗುಂಡೆ, ಮಾಜಿ SAI ಅಧಿಕಾರಿ ರಾಧಿಕಾ ಶ್ರೀಮನ್ ಮತ್ತು ಮಾಜಿ TOPS ಸಿಇಒ ರಾಜೇಶ್ ರಾಜಗೋಪಾಲನ್ ಇತರ ಸದಸ್ಯರಾಗಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ನಾನು ಭಾರತಕ್ಕೆ ಹಿಂತಿರುಗಿದಾಗ ನನ್ನನ್ನು ನೋಡಿ : ಅಮೆರಿಕದಲ್ಲಿ ರಾಹುಲ್ ಗಾಂಧಿ ಹೇಳಿಕೆಗೆ ವಿದೇಶಾಂಗ ಸಚಿವ ಜೈಶಂಕರ ಉತ್ತರ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement