ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯುದ್ಧ ಪೀಡಿತ ಸುಡಾನ್‌ನಿಂದ ರಕ್ಷಿಸಲ್ಪಟ್ ಭಾರತೀಯರ ಮೊದಲ ಬ್ಯಾಚ್‌

ನವದೆಹಲಿ : ಸುಡಾನ್‌ನಿಂದ ರಕ್ಷಿಸಲ್ಪಟ್ಟ 360 ಭಾರತೀಯರನ್ನು ಹೊತ್ತ ವಾಣಿಜ್ಯ ವಿಮಾನವು ಬುಧವಾರ ಸಂಜೆ ನವದೆಹಲಿಯಲ್ಲಿ ಬಂದಿಳಿಯಿತು.
ಸೌದಿ ಅರೇಬಿಯನ್ ಏರ್‌ಲೈನ್ಸ್ ವಿಮಾನವು ಜೆಡ್ಡಾ ಕಿಂಗ್ ಅಬ್ದುಲ್ ಅಜೀಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1:56 ಕ್ಕೆ ಹೊರಟು ರಾತ್ರಿ 9 ಗಂಟೆಗೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಿತು.
ಸುಡಾನ್ ಸೈನ್ಯ ಮತ್ತು ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆಗಳ (RSF) ನಡುವಿನ ಹೋರಾಟದ ನಂತರ ಸರ್ಕಾರವು ಸುಡಾನ್‌ನಲ್ಲಿ ಸಿಲುಕಿರುವ ತನ್ನ ನಾಗರಿಕರಿಗೆ ಸ್ಥಳಾಂತರಿಸುವ ಕಾರ್ಯಾಚರಣೆ ಆಪರೇಶನ್‌ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಭಾರತವು ಸ್ಥಳಾಂತರಿಸಲ್ಪಟ್ಟವರನ್ನು ಸೌದಿ ಅರೇಬಿಯಾದ ಜೆಡ್ಡಾ ನಗರಕ್ಕೆ ಕರೆದೊಯ್ಯುತ್ತಿದೆ, ಅಲ್ಲಿಂದ ಅವರು ಭಾರತಕ್ಕೆ ಮರಳುತ್ತಿದ್ದಾರೆ.
ಸೈನ್ಯ ಮತ್ತು ಅರೆಸೇನಾ ಪಡೆಗಳ ನಡುವಿನ ಕದನ ವಿರಾಮ ಅಂತ್ಯಗೊಳ್ಳುವ ಮೊದಲು ಭಾರತವು ತನ್ನ ನಾಗರಿಕರನ್ನು ಸಂಘರ್ಷ ವಲಯದಿಂದ ಹೊರತರಲು ಹರಸಾಹಸ ಮಾಡುತ್ತಿದೆ. ಇಲ್ಲಿಯವರೆಗೆ, ಕನಿಷ್ಠ 534 ಭಾರತೀಯ ಪ್ರಜೆಗಳನ್ನು ಸುಡಾನ್‌ನಿಂದ ಸ್ಥಳಾಂತರಿಸಲಾಗಿದೆ
ಭಾರತೀಯ ನೌಕಾಪಡೆಯ ಹಡಗು ಆ ದೇಶದಿಂದ 278 ನಾಗರಿಕರನ್ನು ರಕ್ಷಿಸಿದ ಒಂದು ದಿನದ ನಂತರ, ಭಾರತೀಯ ವಾಯುಪಡೆಯ ಎರಡು C-130J ಮಿಲಿಟರಿ ಸಾರಿಗೆ ವಿಮಾನಗಳು ಬುಧವಾರ ಪೋರ್ಟ್ ಸುಡಾನ್‌ನಿಂದ 256 ಭಾರತೀಯರನ್ನು ಜೆಡ್ಡಾಕ್ಕೆ ಕರೆತಂದಿವೆ.
ಸುಡಾನ್ ಅಧಿಕಾರಿಗಳ ಹೊರತಾಗಿ, ವಿದೇಶಾಂಗ ಸಚಿವಾಲಯ ಮತ್ತು ಸುಡಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ವಿಶ್ವ ಸಂಸ್ಥೆ, ಸೌದಿ ಅರೇಬಿಯಾ, ಯುಎಇ, ಈಜಿಪ್ಟ್ ಮತ್ತು ಅಮೆರಿಕ ಇತರ ದೇಶಗಳೋಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಮತದಾನಕ್ಕೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement