ಜೆಡಿಎಸ್ ಪ್ರಣಾಳಿಕೆ ಬಿಡುಗಡೆ : ರೈತ ಯುವಕರನ್ನು ಮದುವೆಯಾದರೆ ₹2 ಲಕ್ಷ ಪ್ರೋತ್ಸಾಹ ಧನ

ಜೆಡಿಎಸ್ ಪ್ರಣಾಳಿಕೆ ಬಿಡುಗಡೆ : ರೈತ ಯುವಕರನ್ನು ಮದುವೆಯಾದರೆ ₹2 ಲಕ್ಷ ಪ್ರೋತ್ಸಾಹ ಧನ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೇವಲ 13 ದಿನ ಮಾತ್ರ ಬಾಕಿ ಉಳಿದಿರುವಾಗ ಜೆಡಿಎಸ್‌ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.
ರೈತ ಯುವಕರನ್ನು ಮದುವೆಯಾಗುವ ಯುವತಿಯರಿಗೆ ₹2 ಲಕ್ಷ ನೀಡುವುದಾಗಿ ಹೇಳಿದೆ. ಬಿಜೆಪಿ ಸರ್ಕಾರ ರದ್ದು ಮಾಡಿರುವ ಮುಸ್ಲಿಮರ ಶೇ.4ರಷ್ಟು ಮೀಸಲಾತಿಯನ್ನು ಮತ್ತೆ ಜಾರಿ ಮಾಡುವುದಾಗಿ ಜೆಡಿಎಸ್‌ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ.
ಪ್ರಣಾಳಿಕೆಯಲ್ಲಿ ಮಾತೃಶ್ರಿ ಯೋಜನೆ ಜಾರಿ ಜಾರಿ ಮಾಡುವ ಭರವಸೆ ನೀಡಿದ್ದು, ಈ ಯೋಜನೆಯಲ್ಲಿ ಗರ್ಭಿಣಿಯರಿಗೆ 6 ತಿಂಗಳು 6 ಸಾವಿರ ರೂ ಭತ್ಯೆ ನೀಎಉವ ಭರವಸೆ ನೀಡಲಾಗಿದೆ. ಸ್ತ್ರಿಶಕ್ತಿ ಗುಂಪುಗಳ ಸಾಲಮನ್ನಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಕೆಲಸ ಖಾಯಂ. ಕೃಷಿಕರಿಗಾಗಿ ರೈತಬಂಧು ಯೋಜನೆ ಜಾರಿ. ಕೃಷಿಕರಿಗೆ 2 ಸಾವಿರ ರೂ ಸಹಾಯಧನ. ಬಿತ್ತನೆ ಬೀಜ, ಗೊಬ್ಬರ ಖರೀದಿಸಲು 10 ಸಾವಿರ ರೂ ಸಹಾಯಧನ ನೀಡಲಾಗುತ್ತದೆ. ರೈತ ಯುವಕರನ್ನ ಮದುವೆಯಾಗುವ ಯುವತಿಯರಿಗೆ 2 ಲಕ್ಷ ರೂ ಪ್ರೋತ್ಸಾಹ ಧನ, ಆಟೋ ಚಾಲಕರಿಗೆ 2ಸಾವಿರ ರೂ. ಮಾಶಾಸನ. ಹಿರಿಯ ನಾಗರಿಕರಿಗೆ 5 ಸಾವಿರ ರೂ. ಮಾಶಾಸನ ನೀಡುವುದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ನೀಡುವುದು ಸೇರಿದಂತೆ ಅನೇಕ ಭರವಸೆಗಳನ್ನು ಪ್ರಣಾಳಿಕೆಯಲ್ಲಿ ಘೋಷಿಸಿದ್ದಾರೆ.
ಪಂಚರತ್ನ ಯೋಜನೆ, ಸಾಮಾಜಿಕ ಭದ್ರತೆಗಳು, ಕೈಗಾರಿಕಾ ಅಭಿವೃದ್ಧಿ, ಸಾರಿಗೆ ಮತ್ತು ಪ್ರವಾಸೋದ್ಯಮ, ಜಲಧಾರೆ, ರಸ್ತೆ ಅಭಿವೃದ್ಧಿ- ಸಂಪರ್ಕ ಸೇತುವೆಗಳು, ಇಂಧನ ವಲಯ, ಆಡಳಿತ ಸುಧಾರಣೆ, ಕೃಷಿ ಮತ್ತು ಹೈನುಗಾರಿಕೆಯ ವಿಭಾಗದಲ್ಲಿ ಬಿಡುಗಡೆ ಮಾಡಲಾಗಿದೆ.
ಜೆಡಿಎಸ್‌ ಪ್ರಣಾಳಿಕೆಯ ಪ್ರಮುಖ ಅಂಶಗಳು
ರೈತ ಯುವಕರನ್ನು ಮದುವೆ ಆಗುವ ಯುವತಿಯರಿಗೆ ₹2 ಲಕ್ಷ ಪ್ರೋತ್ಸಾಹ ಧನ
ಮುಸ್ಲಿಮರ ಶೇ.4ರಷ್ಟು ಮೀಸಲಾತಿಯನ್ನು ಮತ್ತೆ ಜಾರಿ
ಗರ್ಭಿಣಿ ತಾಯಂದಿರಿಗೆ 6 ತಿಂಗಳ ಕಾಲ ₹6,000 ಭತ್ಯೆ
ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಸಾಲಮನ್ನಾ
ವಿಧವಾ ವೇತನ ₹900 ರಿಂದ ₹2,500 ಹೆಚ್ಚಳ
ವರ್ಷಕ್ಕೆ 5 ಅಡುಗೆ ಅನಿಲ ಸಿಲಿಂಡರ್ ಉಚಿತ
ಹಿರಿಯ ನಾಗರಿಕರ ಮಾಸಾಶನ ₹1,200 ದಿಂದ ₹5000 ಗಳಿಗೆ ಏರಿಕೆ
ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಕಾರ್ಯಕರ್ತೆಯರಿಗೆ ಪಿಂಚಣಿ
ಬಿತ್ತನೆ ಬೀಜ, ರಸಗೊಬ್ಬರ ಖರೀದಿಗೆ ಪ್ರತಿ ಎಕರೆಗೆ ₹10,000 ಸಹಾಯ ಧನ
ಪ್ರತಿ ಕೃಷಿ ಕಾರ್ಮಿಕ ಕುಟುಂಬಕ್ಕೆ ಮಾಸಿಕ ₹2000 ಸಹಾಯಧನ
ಪ್ರತಿ ಆಟೋ ಚಾಲಕನಿಗೆ ಪ್ರತಿ ತಿಂಗಳು ₹2 ಸಾವಿರ ಮಾಸಾಶನ
ನೋಂದಾಯಿತ ಖಾಸಗಿ ಸೆಕ್ಯೂರಿಟಿ ಗಾರ್ಡ್‌ಗಳಿಗೆ ಮಾಸಿಕ ₹2 ಸಾವಿರ ಸಹಾಯಧನ
ರಾಜ್ಯ ಸರ್ಕಾರ ರದ್ದು ಮಾಡಿರುವ ಮುಸ್ಲಿಮರ ಶೇ.4ರಷ್ಟು ಮೀಸಲಾತಿ ಮರು ಜಾರಿ
ಕಲಾವಿದರ ಮಾಸಾಶನವನ್ನು 2 ಸಾವಿರ ರೂ.ನಿಂದ 4 ಸಾವಿರಕ್ಕೆ ಏರಿಕೆ
ವೃತ್ತಿನಿರತ ವಕೀಲರ ರಕ್ಷಣೆಗೆ ಕಾಯಿದೆ, ನೂತನವಾಗಿ ನೋಂದಾಯಿತ ವಕೀಲರ ಮಾಸಿಕ ಭತ್ಯೆ 2 ಸಾವಿರದಿಂದ 3 ಸಾವಿರಕ್ಕೆ ಏರಿಕೆ
ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕರಿಗೆ ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ₹5000 ವರೆಗೆ ಹೆಚ್ಚಿನ ವೇತನ
ಡಿಗ್ರಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಸ್ಕೂಟರ್‌ ವಿತರಣೆ
ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮೆಡಿಕಲ್‌, ಇಂಜಿನಿಯರಿಂಗ್‌ಗೆ ಉಚಿತ ಪ್ರವೇಶ
ಕೃಷಿ ಪಂಪಸೆಟ್‌ಗೆ 24/7 ಉಚಿತ ಗುಣಮಟ್ಟದ ವಿದ್ಯುತ್‌ ಸೌಲಭ್ಯ ಮತ್ತು ಸೋಲಾರ್‌ ಪಂಪ್‌ಗಳ ಅಳವಡಿಕೆ

ಪ್ರಮುಖ ಸುದ್ದಿ :-   ಬಿಜೆಪಿ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟ : ಚಿತ್ರದುರ್ಗದಲ್ಲಿ ಹಾಲಿ ಸಂಸದರಿಗೆ ಕೊಕ್, ಯಡಿಯೂರಪ್ಪ ಆಪ್ತನಿಗೆ ಟಿಕೆಟ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement