ನೂರಾರು ಕಾರ್ಯಕರ್ತರೊಂದಿಗೆ ಬಿಜೆಪಿ ಸೇರಿದ ಶಿವಾನಂದ ಹೆಗಡೆ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಳದೀಪುರದಲ್ಲಿ ನಡೆದ ಬೃಹತ್‌ ಕಾರ್ಯಕ್ರಮದಲ್ಲಿ ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಶಿವಾನಂದ ಹೆಗಡೆ ಕಡತೋಕಾ ಅವರು ಸೋಮವಾರ ಸಹಸ್ರಾರು ಅಭಿಮಾನಿಗಳೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು.
ನಂತರ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಕೇವಲ ಹಣವನ್ನು ನೋಡಿ, ಕ್ಷೇತ್ರಕ್ಕೆ ಪರಿಚಯವೇ ಇಲ್ಲದ ಹೊಸಬರನ್ನು ತಂದು ಕುಮಟಾ-ಹೊನ್ನಾವರ ಮತ ಕ್ಷೇತ್ರದ ಟಿಕೆಟ್‌ ನೀಡಿದೆ. ಈ ಕ್ರಮದಿಂದ ಎಲ್ಲಾ ಕಾರ್ಯಕರ್ತರಿಗೆ ನೋವಾಗಿದೆ. ಹೀಗಾಗಿ ಈ ಸಲ ಕಾರ್ಯಕರ್ತರ ಮಾತಿನಂತೆ ಕಾಂಗ್ರೆಸ್ ಪಕ್ಷದಿಂದ ಹೊರಬಂದು ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದರು.ಕುಮಟಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನು ಸೋಲಿಸಲು ಬಿಜೆಪಿಯ ದಿನಕರ ಶೆಟ್ಟಿ ಅವರನ್ನು ಬೆಂಬಲಿಸುವ ಮೂಲಕ ಬಿಜೆಪಿ ಗೆಲುವಿಗೆ ಎಲ್ಲಾ ಕಾರ್ಯಕರ್ತರು ಶ್ರಮ ವಹಿಸಬೇಕೆಂದು ಕರೆ ನೀಡಿದರು.

ಕಾಂಗ್ರೆಸ್‌ಗೆ ಕೇವಲ ಬಿಜೆಪಿ ಟೀಕಿಸುವುದೇ ಕೆಲಸವಾಗಿದೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ವಿರುದ್ಧ ಬೀದಿ ಬೀದಿಯಲ್ಲಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಈಗ ಅವರನ್ನೇ ಕರೆದು ಟಿಕೆಟ್ ನೀಡಿದೆ ಎಂದು ಟೀಕಿಸಿದರು.
ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಮಾತನಾಡಿ, ಶಿವಾನಂದ ಹೆಗಡೆ ಅವರು ಬಿಜೆಪಿಗೆ ಬಂದಿದ್ದು ನನಗೆ ಬಲಬಂದಿದೆ ಎಂದು ಹೇಳಿದೆ. ಶಿವಾನಂದ ಹೆಗಡೆಯವರ ಅಭಿಮಾನಿಗಳಿಂದ ನನ್ನ ಗೆಲುವು ನಿಶ್ಚಿತ ಎಂದರು.
ಗೋವಾದ ಶಾಸಕ ಕೃಷ್ಣ ಸಾಲ್ಕರ್ ಮಾತನಾಡಿ, ಈ ಕ್ಷೇತ್ರದಲ್ಲಿ ಓಡಾಡುವಾಗ ಶಿವಾನಂದ ಹೆಗಡೆ ಸವರ ಬಗ್ಗೆ ಸಾಕಷ್ಟು ಕೇಳಿದ್ದೇನೆ. ಸರಿಯಾದ ವ್ಯಕ್ತಿ ತಪ್ಪಾದ ಪಕ್ಷದಲ್ಲಿ ಇದ್ದರು. ಇದೀಗ ಬಿಜೆಪಿ ಗೆ ಬಂದು ಎಲ್ಲವೂ ಸರಿಯಾಗುತ್ತಿದೆ ಎಂದರು.
ಜಿಲ್ಲಾ ಚುನಾವಣಾ ಸಂಚಾಲಕ ಕೆ.ಜಿ ನಾಯ್ಕ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಎಂ.ಜಿ ಭಟ್ಟ, ಸುಬ್ರಾಯ ವಾಳ್ಕೆ, ವೆಂಕಟ್ರಮಣ ಹೆಗಡೆ, ನಾಗರಾಜ ನಾಯ್ಕ ತೊರ್ಕೆ ಇತರರಿರಿದ್ದರು. ರಾಜು ಭಂಡಾರಿ ಸ್ವಾಗತಿಸಿದರು. ಮಂಜುನಾಥ ನಾಯ್ಕ ವಂದಿಸಿದರು.

ಪ್ರಮುಖ ಸುದ್ದಿ :-   ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 10 ಹಳದಿ ಅನಕೊಂಡ ಹಾವುಗಳು ವಶಕ್ಕೆ, ಓರ್ವನ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement