ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಲಬುರ್ಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ದೈನಂದಿನ ವರದಿಯಲ್ಲಿ ಹೇಳಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಕೊಡುಗು, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ನಾಳೆ (ಮೇ 2) ಸಹ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ಇದೆ. ಅಲ್ಲದೇ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ದಕ್ಷಿಣ ಒಳನಾಡಿನ ಹಲವು ಭಾಗಗಳು ಹಾಗೂ ಉತ್ತರ ಒಳನಾಡು ಹಾಗೂ ಕರಾವಳಿ ಕರ್ನಾಟಕದ ಹಲವೆಡೆ ನಿನ್ನೆ (ಏ.30) ಭಾರಿ ಮಳೆಯಾಗಿದೆ. ಹಾಸನದ ಕೊನೂರಿನಲ್ಲಿ 8 ಸೆಂ ಮೀಟರ್ ಮಳೆಯಾಗಿದ್ದರೆ, ಯಾದಗಿರಿಯ ಕಕೇರಿಯಲ್ಲಿ 7 ಸೆಂಟಿ ಮೀಟರ್ ಮಳೆ ಸುರಿದಿದೆ.ಚಿಕ್ಕಮಗಳೂರಿನ ಶಿವಾನಿಯಲ್ಲಿ 6, ವಿಜಯಪುರದ ಆಲಮಟ್ಟಿ, ಚಿತ್ರದುರ್ಗದ ಹೊಸದುರ್ಗ, ತುಮಕೂರಿನ ಗುಬ್ಬಿ, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ತಲಾ 5 ಸೆಂಟಿ ಮೀಟರ್ ಮಳೆಯಾಗಿದೆ. ತಾವರಗೇರಾ, ಸಿಂಧನೂರು, ಮುದಗಲ್, ಶೋರಾಪುರ, ಕುಡತಿನಿ, ಶ್ರವಣಬೆಳಗೊಳದಲ್ಲಿ ತಲಾ 4, ಸುಳ್ಯ, ನಾರಾಯಣಪುರ, ಕವಡಿಮಟ್ಟಿ, ಹುಣಸಗಿ, ಇಳಕಲ್, ಬಾದಾಮಿ, ರಾಯಚೂರಿನ ಜಾಲಹಳ್ಳಿ, ಪೊನ್ನಂಪೇಟೆ, ಭಾಗಮಂಡಲ, ಹುಣಸೂರು, ಕಮ್ಮರಡಿ, ಅರಕಲಗೂಡು, ಕೃಷ್ಣರಾಜಸಾಗರ, ಬೆಳ್ಳೂರು, ಬರಗೂರು, ಕುಣಿಗಲ್‌ನಲ್ಲಿ ತಲಾ 3, ಗುತ್ತಲ್, ಬಿಳಗಿ, ಮಸ್ಕಿ, ಮಾನ್ವಿ, ಯಲಬುರ್ಗಾ, ಗಂಗಾವತಿ, ಭಾಲ್ಕಿ, ಬೆಂಗಳೂರು ಓಲ್ಡ್ ಏರ್ಪೋರ್ಟ್, ಚನ್ನರಾಯಪಟ್ಟಣ, ಬೆಂಗಳೂರು ನಗರ, ಬುಕ್ಕಪಟ್ಟಣ, ಶಿವಮೊಗ್ಗ, ಸೋಮವಾರಪೇಟೆ, ಕೊಟ್ಟಿಗೆಹಾರ, ಸರಗೂರಿನಲ್ಲಿ ತಲಾ 2 ಸೆಂಟಿ ಮೀಟರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಗಣನೀಯವಾಗಿ ಇಳಿಕೆಯಾಗುತ್ತಿದೆ. 2.1 ರಿಂದ 4 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ತಗ್ಗಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್‌ ರೇವಣ್ಣ ಪ್ರಕರಣ : ದೇವೇಗೌಡ, ಎಚ್‌ಡಿಕೆಯನ್ನು ತಪ್ಪಾಗಿ ಬಿಂಬಿಸಿ ಸುದ್ದಿ ಪ್ರಸಾರ ಮಾಡದಂತೆ 89 ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement