“ಮೋದಿ ಉಪನಾಮ” ಮಾನನಷ್ಟ ಪ್ರಕರಣ: ರಾಹುಲ್ ಗಾಂಧಿಗೆ ಮಧ್ಯಂತರ ʼರಕ್ಷಣೆʼ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್

2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ “ಮೋದಿ ಉಪನಾಮ” ಹೇಳಿಕೆಗೆ ಸಂಬಂಧಿಸಿದಂತೆ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿದ ಮನವಿಯನ್ನು ಗುಜರಾತ್ ಹೈಕೋರ್ಟ್ ಮಂಗಳವಾರ ವಿಚಾರಣೆ ನಡೆಸಿತು. ಬೇಸಿಗೆ ರಜೆ ಮುಗಿದ ನಂತರ ಗುಜರಾತ್ ಹೈಕೋರ್ಟ್ ಈ ಬಗ್ಗೆ ತೀರ್ಪು ನೀಡುವುದಾಗಿ ಹೇಳಿದೆ.
2019 ರ ಮಾನನಷ್ಟ ಪ್ರಕರಣದಲ್ಲಿ ಕಳೆದ ಮಾರ್ಚ್‌ನಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಲಾಯಿತು ಮತ್ತು ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಈ ದೋಷಾರೋಪಣೆಯ ನಂತರ, ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡರು.
ಸೂರತ್ ನ್ಯಾಯಾಲಯದ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ. ಗುಜರಾತ್ ಹೈಕೋರ್ಟ್ ಮಂಗಳವಾರ ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿದೆ. ರಜೆಯ ನಂತರ ಜೂನ್‌ನಲ್ಲಿ ತೀರ್ಪು ನೀಡುವುದಾಗಿ ಹೇಳಿದೆ.
ರಾಹುಲ್ ಗಾಂಧಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, “ಕ್ರಿಮಿನಲ್ ಮಾನನಷ್ಟಕ್ಕಾಗಿ ಗರಿಷ್ಠ ಶಿಕ್ಷೆ ವಿಧಿಸಿದ ಮೊಟ್ಟಮೊದಲ ಪ್ರಕರಣ ಎಂದು ವಾದಿಸಿದರು.
ಸಿಂಘ್ವಿ ಇಂದು, ಮಂಗಳವಾರ ಅರ್ಜಿಯ ಕುರಿತು ನ್ಯಾಯಾಲಯದ ನಿರ್ಧಾರವನ್ನು ಕೋರಿದರು. ಆದಾಗ್ಯೂ, ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರು, ಈ ಹಂತದಲ್ಲಿ ಯಾವುದೇ ಮಧ್ಯಂತರ ರಕ್ಷಣೆ ನೀಡುವುದಿಲ್ಲ. ಆದ್ದರಿಂದ, ಈ ವಿಷಯವನ್ನು ಬೇಸಿಗೆ ರಜೆಯ ನಂತರದ ಅಂತಿಮ ತೀರ್ಪಿಗೆ ಇರಿಸಲಾಗಿದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಕುಖ್ಯಾತ ಗ್ಯಾಂಗ್‌ಸ್ಟರ್‌-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ಸಾವು

ಮಾರ್ಚ್ 23 ರಂದು, ಕೇರಳದ ವಯನಾಡು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ರಾಹುಲ್ ಗಾಂಧಿಯನ್ನು ಕ್ರಿಮಿನಲ್ ಮಾನನಷ್ಟಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. “ಎಲ್ಲಾ ಕಳ್ಳರು ಮೋದಿ ಎಂಬ ಸಾಮಾನ್ಯ ಉಪನಾಮವನ್ನಾಗಿ ಯಾಕೆ ಹೊಂದಿರುತ್ತಾರೆ?” ಎಂದು ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಯವರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. 2019 ರಲ್ಲಿ ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಅವರು ಈ ಹೇಳಿಕೆ ನೀಡಿದ್ದರು.ಶಿಕ್ಷೆಯ ನಂತರ ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಅನರ್ಹಗೊಳಿಸಲಾಯಿತು.

ಏಪ್ರಿಲ್ 3 ರಂದು, ರಾಹುಲ್ ಗಾಂಧಿ ಅವರ ವಕೀಲರು ಎರಡು ಅರ್ಜಿಗಳೊಂದಿಗೆ ಸೆಷನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದರು. ಒಂದು ಜಾಮೀನಿಗಾಗಿ ಮತ್ತು ಇನ್ನೊಂದು ಮೇಲ್ಮನವಿ ಬಾಕಿ ಉಳಿದಿರುವ ಅಪರಾಧಕ್ಕೆ ತಡೆಯಾಜ್ಞೆ ನೀಡುವುದಕ್ಕಾಗಿ ಸಲ್ಲಿಸಲಾಗಿತ್ತು. ಜೊತೆಗೆ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸುವ ಕೆಳ ನ್ಯಾಯಾಲಯದ ಆದೇಶದ ವಿರುದ್ಧ ಅವರ ಮುಖ್ಯ ಮೇಲ್ಮನವಿಯಲ್ಲಿ ಪ್ರಶ್ನಿಸಿದ್ದರು. ನ್ಯಾಯಾಲಯವು ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು ಮಾಡಿದರೂ, ಶಿಕ್ಷೆಗೆ ತಡೆಯಾಜ್ಞೆ ನೀಡುವ ಅವರ ಮನವಿಯನ್ನು ಅದು ತಿರಸ್ಕರಿಸಿತು.
ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತಮ್ಮ ಶಿಕ್ಷೆಗೆ ತಡೆಯಾಜ್ಞೆ ನಿರಾಕರಿಸಿದ ಸೂರತ್ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ನಂತರ ಗುಜರಾತ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಮುಖ ಸುದ್ದಿ :-   ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement