ಕರ್ನಾಟಕ ಚುನಾವಣೆ : 24 ಬಂಡಾಯ ಅಭ್ಯರ್ಥಿಗಳನ್ನು ಉಚ್ಚಾಟಿಸಿದ ಕಾಂಗ್ರೆಸ್‌

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ 24 ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಿದೆ.
ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ನಂತರ ಅನೇಕ ಕಾಂಗ್ರೆಸ್‌ ನಾಯಕರು ಪಕ್ಷೇತರವಾಗಿ ಅಥವಾ ಬಂಡಾಯ ಅಭ್ಯರ್ಥಿಗಳಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಈಗ ಕೆಪಿಸಿಸಿ ಶಿಸ್ತು ಪಾಲನ ಸಮಿತಿ ಅವರ ವಿರುದ್ಧ ಕ್ರಮ ಕೈಗೊಂಡಿದೆ.
ಮಾಜಿ ಶಾಸಕರಾದ ರಾಮಕೃಷ್ಣ ದೊಡ್ಡಮನಿ, ಬಿ ಬಿ ರಾಮಸ್ವಾಮಿಗೌಡ (ಕುಣಿಗಲ್) ಸೇರಿದಂತೆ 24 ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಹಾಗೂ ಪ್ರಚಾರದಲ್ಲಿ ಭಾಗವಹಿಸಿದರೆ ಅಂಥವರ ವಿರುದ್ಧವೂ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಿಸ್ತು ಸಮಿತಿಯ ಅಧ್ಯಕ್ಷ ಕೆ ರೆಹಮಾನ್ ಖಾನ್ ಆದೇಶದಲ್ಲಿ ತಿಳಿಸಿದ್ದಾರೆ.
ಉಚ್ಚಾಟನೆಗೊಂಡವರು: ಮಾಜಿ ಶಾಸಕರಾದ ರಾಮಕೃಷ್ಣ ದೊಡ್ಡಮನಿ (ಶಿರಹಟ್ಟಿ), ಬಿ ಬಿ ರಾಮಸ್ವಾಮಿಗೌಡ (ಕುಣಿಗಲ್), ಎಚ್‌.ಪಿ.ರಾಜೇಶ (ಜಗಳೂರು), ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಪಿ ಲತಾ ಮಲ್ಲಿಕಾರ್ಜುನ (ಹರಪನಹಳ್ಳಿ), ಕೃಷ್ಣೇಗೌಡ (ಅರಕಲಗೂಡು), ಕೆಪಿಸಿಸಿ ಸಂಯೋಜಕ ಚಂದ್ರಾ ಸಿಂಗ್ (ಬೀದರ ದಕ್ಷಿಣ), ಚಿಕ್ಕಮಗಳೂರು ಡಿಸಿಸಿ ಉಪಾಧ್ಯಕ್ಷ ಗೋಪಿಕೃಷ್ಣ (ತರೀಕೆರೆ), ಯುವ ಕಾಂಗ್ರೆಸ್ ಮುಖಂಡ ಇರ್ಫಾನ್ ತಾಳಿಕೋಟೆ (ಖಾನಾಪುರ), ಕಿಸಾನ್ ಸೆಲ್ ಉಪಾಧ್ಯಕ್ಷ ಪದ್ಮಜಿತ್ ನಾಡಗೌಡ (ತೇರದಾಳ), ಬಸವರಾಜ್ ಮಲ್ಕಾರಿ (ಹುಬ್ಬಳ್ಳಿ-ಧಾರವಾಡ ಪಶ್ಚಿಮ), ಉಮಾದೇವಿ (ನೆಲಮಂಗಲ), ಯೂಸುಫ್ ಅಲಿ ಜಾಮದಾರ್ (ಬೀದರ ದಕ್ಷಿಣ), ನಾರಾಯಣ ಬಂಗಿ (ಬೀದರ್ ದಕ್ಷಿಣ), ವಿಜಯಕುಮಾರ ಬರೂರು (ಬೀದರ ದಕ್ಷಿಣ), ಸವಿತಾ ಮಲ್ಲೇಶ ನಾಯಕ್ (ಮಾಯಕೊಂಡ), ಪಿ.ಎಚ್. ಚಂದ್ರಶೇಖರ್ (ಶ್ರೀರಂಗಪಟ್ಟಣ), ಪುಟ್ಟ ಆಂಜನಪ್ಪ (ಶಿಡ್ಲಘಟ್ಟ), ಶಂಭು ಕೋಲ್ಕರ್ (ರಾಯಬಾಗ್), ಬಿ.ಎಚ್. ಭೀಮಪ್ಪ (ಶಿವಮೊಗ್ಗ ಗ್ರಾಮಾಂತರ), ಎಸ್.ಪಿ. ನಾಗರಾಜಗೌಡ (ಶಿಕಾರಿಪುರ), ದೋರ್ನಲ್ ಪರಮೇಶ್ವರಪ್ಪ (ತರೀಕೆರೆ), ಶಶಿ ಚೌಧಿ (ಬೀದರ್), ಲಕ್ಷ್ಮಣ ಸೊರಳಿ (ಔರಾದ್), ಮುಜೀಬುದ್ದೀನ್ (ರಾಯಚೂರು ನಗರ) ಅವರುಗಳನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

ಪ್ರಮುಖ ಸುದ್ದಿ :-   ಮಂಗಳೂರಲ್ಲಿ ಅಭೂತಪೂರ್ವ ರೋಡ್ ಶೋ : ಕರಾವಳಿ ಜನರ ಬಗ್ಗೆ ಪ್ರಧಾನಿ ಮೋದಿ ಟ್ವೀಟ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement