ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿದೆ. ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಬಿ. ಫಾರ್ಮ್ ಸೇರಿದಂತೆ ವಿವಿಧ ಕೋರ್ಸ್ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆಗೆ ಕೆಎಸ್ಆರ್ಟಿಸಿ ಸುತ್ತೋಲೆ ಹೊರಡಿಸಿದೆ. ವಿದ್ಯಾರ್ಥಿಗಳ ತರಗತಿ ಅಥವಾ ಪರೀಕ್ಷೆ ನಡೆಯುತ್ತಿರುವುದನ್ನು ಖಚಿತಪಡಿಸಿಕೊಮಡು ಹೆಚ್ಚುವರಿ ಹಣ ಪಾವತಿಸಿಕೊಂಡು ಒಂದು ಅಥವಾ ಎರಡ ತಿಂಗಳ ಅವಧಿಗೆ ಬಸ್ ಪಾಸ್ ವಿಸ್ತರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಎಲ್ಲಾ ಚಾಲಕ-ನಿರ್ವಾಹಕರಿಗೆ ಅಗತ್ಯ ಮಾಹಿತಿ ನೀಡುವಂತೆ ಕೆಎಸ್ಆರ್ಟಿಸಿ ಮುಖ್ಯ ವ್ಯವಸ್ಥಾಪಕರ ಸುತ್ತೋಲೆ ತಿಳಿಸಿದೆ.
ಏಪ್ರಿಲ್ನಲ್ಲಿ ಬಸ್ ಪಾಸ್ ಅವಧಿ ಮುಗಿಯಲಿದೆ. ಆದರೆ ಕೆಲ ಕೋರ್ಸ್ಗಳ ಪರೀಕ್ಷೆಗಳು ಇರುವುದರಿಂದ ಪಾಸ್ ಅವಧಿ ವಿಸ್ತರಣೆಗೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಅದಂತೆ ವಿವಿಧ ಕೋರ್ಸ್ಗಳ ಪರೀಕ್ಷಾ ವೇಳಾಪಟ್ಟಿಯನ್ನು ಪರಿಶೀಲಿಸಿ ಬಸ್ ಪಾಸ್ ಒಂದು ಅಥವಾ ಎರಡು ತಿಂಗಳು ವಿಸ್ತರಿಸಲಾಗುತ್ತಿದೆ. ವಿದ್ಯಾರ್ಥಿಗಳು ನಿಯಮಾನುಸಾರವಾಗಿ ಬಸ್ ಪಾಸ್ಗೆ ಹಣ ಪಾವತಿಸಿ ರಶೀದಿ ಪಡೆದುಕೊಂಡು ಪ್ರಯಾಣ ಮಾಡಬಹುದಾಗಿದೆ. ಪ್ರಯಾಣಿಸುವಾಗ ಶುಲ್ಕ ಪಾವತಿ ರಶೀದು ಹಾಗೂ ಬಸ್ ಪಾಸ್ ಎರಡನ್ನೂ ತೋರಿಸಿ ಪ್ರಯಾಣಿಸಬಹುದಾಗಿದೆ ಎಂದು ಅದು ಹೇಳಿದೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ನಿಮ್ಮ ಕಾಮೆಂಟ್ ಬರೆಯಿರಿ