ಯಾದಗಿರಿ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಮೃತರನ್ನು ಸುರಪುರ ತಾಲೂಕಿನ ರಂಗಂಪೇಟೆ ನಿವಾಸಿಗಳಾದ ನಾಗರಾಜು ಸಜ್ಜನ್(59), ಮಹಾದೇವಿ(50), ರೇಣುಕಾ(45) ಎಂದು ಗುರುತಿಸಲಾಗಿದೆ.
ಮೃತ ನಾಗರಾಜು ಸಜ್ಜನ್ ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿದ್ದರು. ಕಲಬುರಗಿಯಲ್ಲಿ ಸಂಬಂಧಿಕರ ಮದುವೆ ಮುಗಿಸಿ ಹಿಂದಿರುಗುವಾಗ ಘಟನೆ ನಡೆದಿದೆ ಎನ್ನಲಾಗಿದೆ. ಕೆಎಸ್ಆರ್ಟಿಸಿ ಬಸ್ನಲ್ಲಿದ್ದ ಐದಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತದ ನಂತರ ಸ್ಥಳದಲ್ಲೇ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಭೀಮರಾಯನಗುಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ