ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 15 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆ ಅಸ್ವಸ್ಥ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ 15 ಬಾರಿ ಅಂಬಾರಿ ಹೊತ್ತಿರುವ ಹೆಗ್ಗಳಿಕೆ ಪಾತ್ರನಾಗಿದ್ದ ‘ಬಲರಾಮ’ ಆನೆ (67) ತೀವ್ರ ಅಸ್ವಸ್ಥಗೊಂಡಿದ್ದು, ಕಳೆದ 7 ದಿನಗಳಿಂದ ಆಹಾರ ತ್ಯಜಿಸಿರುವುದಾಗಿ ತಿಳಿದುಬಂದಿದೆ.
7 ದಿನಗಳಿಂದ ಅಸ್ವಸ್ಥಗೊಂಡಿರುವ ಬಲರಾಮನಿಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ತಜ್ಞರ ತಂಡವು ಈಗ ಆನೆಗೆ ಎಂಡೋಸ್ಕೋಪಿ ಮಾಡಲು ಮುಂದಾಗಿದೆ ಎನ್ನಲಾಗಿದೆ. ಆನೆಯ ಗಂಟಲಿನಲ್ಲಿ ಹುಣ್ಣಾಗಿರುವ ಕಾರಣ ಅದಕ್ಕೆ ಆಹಾರ ನುಂಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ.
ಒಂದು ವಾರದಿಂದ ಆಹಾರ ಸೇವಿಸದ ಕಾರಣ ಆನೆ ನಿತ್ರಾಣಗೊಂಡಿದೆ. ಈ ಹಿನ್ನೆಲೆಯಲ್ಲಿ ಪಶುವೈದ್ಯರು ಆನೆಗೆ ದ್ರವ ಪದಾರ್ಥಗಳನ್ನು ನೀಡುವಂತೆ ಸಲಹೆ ನೀಡಿದ್ದಾರೆ. ಆನೆಯನ್ನು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಬಳಿಯ ಭೀಮನಕಟ್ಟೆಯಲ್ಲಿರುವ ವಿಶೇಷ ಆನೆ ಆರೋಗ್ಯ ಶಿಬಿರದಲ್ಲಿರಿಸಿ ನಿರಂತರ ನಿಗಾವಹಿಸಲಾಗಿದೆ. ಡಿದ್ದಾರೆ.
ಆರೈಕೆ ಹಾಗೂ ಆಹಾರವನ್ನು ಸೂಕ್ತ ರೀತಿಯಲ್ಲಿ ನೀಡಿ, ಪಾಲನೆ ಮಾಡುವುದರಿಂದ ಶಿಬಿರಗಳಲ್ಲಿ ಆನೆಗಳು ಹೆಚ್ಚು ಕಾಲ ಬದುಕುಳಿಯುತ್ತವೆ. ಶಿಬಿರಗಳಲ್ಲಿ ಆನೆಗಳು 90 ವರ್ಷಗಳವರೆಗೂ ಬದುಕುಳಿಯುತ್ತವೆ. ಬಲರಾಮ 15 ವರ್ಷಗಳಿಂದ ಚಿನ್ನದ ಅಂಬಾರಿಯನ್ನು ಹೊತ್ತಿದ್ದಾನೆ. ಇತ್ತೀಚೆಗಷ್ಟೇ ಅಭಿಮನ್ಯೂ ಅಂಬಾರಿಯನ್ನು ಹೊತ್ತಿದ್ದ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಮಾರ್ಚ್‌ 31ರೊಳಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬದಲಾವಣೆ ಮಾಡಿ : ಬಿಜೆಪಿ ಹೈಕಮಾಂಡಿಗೆ ಮಠಾಧೀಶರ ಗಡುವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement