ಬಹುಪತ್ನಿತ್ವ ನಿಷೇಧಕ್ಕೆ ಅಸ್ಸಾಂ ಸರ್ಕಾರ ಚಿಂತನೆ, ಪರಶೀಲನೆಗೆ ತಜ್ಞರ ಸಮಿತಿ ರಚನೆ : ಸಿಎಂ ಹಿಮಂತ ಬಿಸ್ವಾ ಶರ್ಮಾ

ಗುವಾಹತಿ : ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಸರ್ಕಾರ ಬಹುಪತ್ನಿತ್ವವನ್ನು ನಿಷೇಧಿಸಲು ಬಯಸಿದೆ ಮತ್ತು ಇದನ್ನು ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ತಮ್ಮ ಸರ್ಕಾರವು ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಮೂಲಕ ಅಲ್ಲ, ರಾಜ್ಯ ಕಾಯಿದೆಯಡಿ ಬಹುಪತ್ನಿತ್ವವನ್ನು ನಿಷೇಧಿಸಲು ಬಯಸುತ್ತದೆ ಎಂದು ಶರ್ಮಾ ಮಂಗಳವಾರ ಹೇಳಿದ್ದಾರೆ. “ಈ ಪ್ರದೇಶದಲ್ಲಿ ಬಹುಪತ್ನಿತ್ವವನ್ನು ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆಯೇ ಎಂದು ತಿಳಿಯಲು ಅಸ್ಸಾಂ ಸರ್ಕಾರ ತಜ್ಞರ ಸಮಿತಿಯನ್ನು ರಚಿಸಲು ನಿರ್ಧರಿಸಿದೆ” ಎಂದು ಅವರು ಹೇಳಿದ್ದಾರೆ.

ಸಮಿತಿಯು ಕಾನೂನು ತಜ್ಞರು ಸೇರಿದಂತೆ ಎಲ್ಲ ಪಾಲುದಾರರೊಂದಿಗೆ ವಿಸ್ತೃತ ಚರ್ಚೆಯಲ್ಲಿ ತೊಡಗಿದ್ದು, ಉತ್ತಮ ತಿಳಿವಳಿಕೆಯುಳ್ಳ ನಿರ್ಧಾರಕ್ಕೆ ಬರಲಿದೆ ಎಂದು ಅವರು ಹೇಳಿದರು. “ಸಮಿತಿಯು ಏಕರೂಪ ನಾಗರಿಕ ಸಂಹಿತೆಗಾಗಿ ರಾಜ್ಯ ನೀತಿಯ ನಿರ್ದೇಶನ ತತ್ವಕ್ಕೆ ಸಂಬಂಧಿಸಿದಂತೆ ಭಾರತದ ಸಂವಿಧಾನದ 25 ನೇ ವಿಧಿಯೊಂದಿಗೆ ಮುಸ್ಲಿಂ ವೈಯಕ್ತಿಕ ಕಾನೂನು (ಶರಿಯತ್) ಕಾಯಿದೆ, 1937 ರ ನಿಬಂಧನೆಗಳನ್ನು ಪರಿಶೀಲಿಸುತ್ತದೆ ಎಂದು ಹೇಳಿದ್ದಾರೆ.

ಬಹುಪತ್ನಿತ್ವದ ಸಾಂವಿಧಾನಿಕ ಸಿಂಧುತ್ವ ಮತ್ತು ಮುಸ್ಲಿಂ ಸಮುದಾಯದ ಸದಸ್ಯರಲ್ಲಿರುವ ‘ನಿಕಾಹ್ ಹಲಾಲಾ’ ಪದ್ಧತಿಯನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಗೆ ಐದು ನ್ಯಾಯಾಧೀಶರ ಸಂವಿಧಾನ ಪೀಠವನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್ ಕೆಲವು ತಿಂಗಳ ಹಿಂದೆ ಹೇಳಿತ್ತು.

ಪ್ರಮುಖ ಸುದ್ದಿ :-   ರೈಲು ನಿಲ್ದಾಣದಲ್ಲಿ ವ್ಯಕ್ತಿಯ ಸಾವಿನ ರಹಸ್ಯ ಭೇದಿಸಿದ ರೈಲು ಪ್ರಯಾಣಿಕನ ಮೊಬೈಲ್‌ ಸೆಲ್ಫಿ...!

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement