ಬೆಂಗಳೂರು ಹೋಟೆಲ್‌ಗಳಲ್ಲಿ ಮತದಾನದ ದಿನ ಉಚಿತ ಊಟ, ತಿಂಡಿ ವಿತರಣೆಗೆ ಬಿಬಿಎಂಪಿ ನಿಷೇಧ

posted in: ರಾಜ್ಯ | 0

ಬೆಂಗಳೂರು: ಮೇ 10ರಂದು ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಮತದಾನದ ವೇಳೆ, ಮತದಾನ ಮಾಡಲು ಉತ್ತೇಜಿಸುವ ಸಲುವಾಗಿ ಕೆಲವು ಹೋಟೆಲ್, ರೆಸ್ಟೋರೆಂಟ್ ಮಾಲೀಕರು ವಿಶೇಷ ಆಫರ್ ಗಳನ್ನು ಘೋಷಿಸಿದ್ದಾರೆ. ಈಗ ಹೋಟೆಲ್ ಮಾಲೀಕರಿಗೆ ಬಿಬಿಎಂಪಿ ಶಾಕ್‌ ನೀಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದಕ್ಕೆ ಅನುಮತಿ ನೀಡುವುದಿಲ್ಲ. ಇಂತಹ ಉಚಿತ​​ಗಳನ್ನು ಹೋಟೆಲ್​​ ಮಾಲೀಕರು ನೀಡಬಾರದು ಎಂದು ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮತದಾನ ಪ್ರಮಾಣ ಹೆಚ್ಚಳ ಮಾಡುವುದಕ್ಕೆ ಜಾಗೃತಿ ಮೂಡಿಸಲಾಗಿತ್ತು. ಹಲವು ರೆಸ್ಟೋರೆಂಟ್, ಹೋಟೆಲ್ ಮಾಲೀಕರು ಮತದಾನ ಮಾಡಿ ಬಂದವರಿಗೆ ಉಚಿತ ಊಟ, ತಿಂಡಿ ನೀಡಲಾಗುವುದು ಎಂದು ಘೋಷಿಸಿಕೊಂಡಿದ್ದರು. ಆದರೆ ಬಿಬಿಎಂಪಿ ಯಾವುದೇ ಹೋಟೆಲ್‌ಗಳಲ್ಲಿ ಉಚಿತ ಊಟ ಅಥವಾ ತಿಂಡಿ ನೀಡುವಂತಿಲ್ಲ ಎಂದು ಆದೇಶ ಹೊರಡಿಸಿದೆ.
ವಿಧಾನಸಭಾ ಚುನಾವಣೆ ಹಿನ್ನಲೆ ರಾಜ್ಯದಲ್ಲಿ ಮಾರ್ಚ್ 29 ರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಮತದಾನ ಮಾಡಿ ಬಂದವರಿಗೆ ಉಚಿತ ಅಥವಾ ರಿಯಾಯಿತಿ ದರದಲ್ಲಿ ಊಟ, ತಿಂಡಿ ನೀಡುವುದರಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗಲಿದ್ದು, ಈ ರೀತಿಯ ಪ್ರಕಟಣೆಗಳಿಗೆ ಸಂಬಂಧಿದಂತೆ ಹೋಟೆಲ್‌ ಮಾಲೀಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಉಚಿತ ಊಟ, ತಿಂಡಿ ನೀಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಪೊಲೀಸರು ಹಣೆಗೆ ಕುಂಕುಮ, ತಿಲಕ ಇಡಬಾರದೆಂದು ಹೇಳಿಲ್ಲ: ಗೃಹ ಸಚಿವ ಡಾ. ಪರಮೇಶ್ವರ ಸ್ಪಷ್ಟನೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement