ಉತ್ತರ ಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಯೋಗಿ ಆದಿತ್ಯನಾಥ

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿವಾದಿತ ಚಲನಚಿತ್ರ ‘ದಿ ಕೇರಳ ಸ್ಟೋರಿ’ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.
ಈ ಕುರಿತು ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ. ಇತ್ತೀಚೆಗಷ್ಟೇ ಮಧ್ಯಪ್ರದೇಶ ಸರ್ಕಾರ ದಿ ಕೇರಳ ಸ್ಟೋರಿ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿತ್ತು. ಮತ್ತೊಂದೆಡೆ ವಿವಾದಿತ ಚಿತ್ರ ಪ್ರದರ್ಶನಕ್ಕೆ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ನಿಷೇಧ ಹೇರಲಾಗಿದೆ. ಇದರ ವಿರುದ್ಧ ಕೋರ್ಟ್‌ಗೆ ಹೋಗುವುದಾಗಿ ಚಿತ್ರ ನಿರ್ಮಾಪಕ ವಿಪುಲ್ ಶಾ ಹೇಳಿದ್ದಾರೆ.
ಸುದೀಪ್ತೋ ಸೇನ್ ನಿರ್ದೇಶನದ ಈ ಚಲನಚಿತ್ರವು ಮೇ 5 ರಂದು ಬಿಡುಗಡೆಯಾಯಿತು. ಇದು ಕೇರಳದ ಮಹಿಳೆಯರನ್ನು ಇಸ್ಲಾಮಿಗೆ ಹೇಗೆ ಪರಿವರ್ತಿಸಲಾಯಿತು ಮತ್ತು ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಗುಂಪುಗಳಿಗೆ ಅವರು ಹೇಗೆ ನೇಮಕಗೊಂಡರು ಎಂಬುದನ್ನು ಚಿತ್ರಿಸುತ್ತದೆ. ಕೇರಳದಿಂದ 32,000 ಮಹಿಳೆಯರು ಇಸ್ಲಾಮಿಕ್ ಸ್ಟೇಟ್‌ಗೆ ಸೇರಿದ್ದಾರೆ ಎಂದು ಚಿತ್ರ ನಿರ್ಮಾಪಕರು ಆರಂಭದಲ್ಲಿ ಹೇಳಿಕೊಂಡಿದ್ದರು, ಆದರೆ ಸಾಕ್ಷ್ಯವನ್ನು ಕೇಳಿದಾಗ, ಚಲನಚಿತ್ರವು “ಮೂರು ಯುವತಿಯರ ನೈಜ ಕಥೆಗಳ ಸಂಕಲನ” ಎಂದು ಹೇಳಿ ಅವರು ಟ್ರೈಲರ್ ಅನ್ನು ಬದಲಾಯಿಸಿದರು.

ಪ್ರಮುಖ ಸುದ್ದಿ :-   ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement