ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಅಭ್ಯರ್ಥಿ ಸಿ.ಟಿ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಸಿ.ಟಿ ರವಿ ಅವರಿಗೆ ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿ.ಟಿ ರವಿ (CT Ravi) ತಡರಾತ್ರಿ ಕಿಡ್ನಿ ಸಮಸ್ಯೆಯಿಂದ ತೊಂದರೆ ಅನುಭವಿಸಿದ್ದು, ತಕ್ಷಣವೇ ಮನೆಯವರು ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚಿಕಿತ್ಸೆ ನಡೆಯುತ್ತಿದೆ. ನಿನ್ನೆ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯಗೊಂಡಿದೆ. ಚುನಾವಣೆಯಲ್ಲಿ ಸಿ.ಟಿ ರವಿ ಅವರು ಸ್ಟಾರ್ ಪ್ರಚಾರಕರಾಗಿದ್ದರು. ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದರು. ನಿನ್ನೆ ಬುಧವಾರ ಕುಟುಂಬ ಸಮೇತ ಚಿಕ್ಕಮಗಳೂರಿನಲ್ಲಿ ಮತದಾನ ಮಾಡಿದ್ದರು. ಆದರೆ ನಿನ್ನೆ ತಡರಾತ್ರಿ ಅವರಿಗೆ ಆರೋಗ್ಯದ ಸಮಸ್ಯೆ ಉಂಟಾಗಿದೆ ಎಂದು ಹೇಳಲಾಗಿದೆ. ಈ ಸಂಬಂಧ ಮತ್ತಷ್ಟು ಮಾಹಿತಿ ಆಸ್ಪತ್ರೆಯಿಂದ ಹೊರ ಬೀಳಬೇಕಿದೆ.
ಕಳೆದ ತಿಂಗಳು ಸಹ ಅವರುಹೊಟ್ಟೆ ನೋವಿನಿಂದ ಸಿ.ಟಿ. ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದ ನಂತರ ಮತ್ತೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ