ಪತ್ನಿಯ ಶೋಕಿಗೆ ಮನನೊಂದು ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣಿಗೆ ಶರಣು

ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದು ತಂದೆ ತಾನೂ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್​​ನಲ್ಲಿ ನಡೆದ ವರದಿಯಾಗಿದೆ.
ಆನೇಕಲ್​​ನ ಕೊಪ್ಪ ಸಮೀಪದ ನಿರ್ಮಾಣ ಬಡಾವಣೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಮೃತರನ್ನು ಬಿಟಿಎಂ ಬಡಾವಣೆ ನಿವಾಸಿ ಹರೀಶ್ ( 35) ಮಕ್ಕಳಾದ ಪ್ರಜ್ವಲ (6) ರಿಷಬ್(4) ಎಂದು ಗುರುತಿಸಲಾಗಿದೆ. ಮೇ 10ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಡಿಗೆ ಮನೆಯಲ್ಲಿ ಮಕ್ಕಳಿಗೆ ನೇಣು ಹಾಕಿ ಅವರು ಸಾವಿಗೀಡಾದ ಬಳಿಕ ಬಳಿಕ ಅದೇ ಹಗ್ಗದಿಂದ ತಂದೆ ಹರೀಶ ಕೂಡ ನೇಣು ಬಿಗಿದುಕೊಂದು ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ.
ಹರೀಶ​ ಆತ್ಮಹತ್ಯೆಗೂ ಮುನ್ನ ಸ್ನೇಹಿತರೊಬ್ಬರಿಗೆ ವಾಟ್ಸಾಪ್ ಕಾಲ್ ಮಾಡಿ ತಾನು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗುತ್ತಿದ್ದು, ತನಗೆ ಬರಬೇಕಾದ ಹಣ ಮತ್ತು ಎಲ್ಐಸಿ ಬಾಂಡ್ ಹಣವನ್ನು ಪತ್ನಿಗೆ ನೀಡುವಂತೆ ಹೇಳಿದ್ದರಂತೆ. ಕೂಡಲೇ ಎಚ್ಚೆತ್ತುಕೊಂಡ ಸ್ನೇಹಿತ ಹರೀಶ ಇರುವ ಲೋಕೇಶಷನ್​ಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲೋಕೇಷನ್​ ಪತ್ತೆಯಾಗಿದೆ.

ಮೃತ ಹರೀಶ​   ಅಕ್ಕನ ಮಗಳನ್ನೇ ಪ್ರೇಮಿಸಿ ವಿವಾಹವಾಗಿದ್ದರು. ಬಳಿಕ ಗಾರ್ವೇಬಾವಿ ಪಾಳ್ಯದಲ್ಲಿ ಪ್ರತ್ಯೇಕ ಮನೆ ಮಾಡಿ ಕುಟುಂಬದೊಂದಿಗೆ ವಾಸಿಸುತ್ತಿದ್ದರು. ಆದರೆ ವಿವಾಹದ ಬಳಿಕ ದಂಪತಿ ನಡುವೆ ಪದೇ ಪದೇ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದ್ದು, ಪತ್ನಿಯ ಐಷಾರಾಮಿ ಜೀವನದಿಂದ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ.
2015ರಲ್ಲಿ ಹಿರಿಯ ಸಮ್ಮುಖದಲ್ಲಿ ರಾಜಿ ಪಂಚಾಯಿತಿ ನಡೆಸಿ ಬಳಿಕ ಹರೀಶ ಪೋಷಕರ ಮನೆಯಲ್ಲಿ ವಾಸಿಸುತ್ತಿದ್ದರಂತೆ. ಆದರೆ 2021ರ ಬಳಿಕ ಪತ್ನಿ ಪ್ರತ್ಯೇಕ ಮನೆ ಮಾಡಲು ಒತ್ತಾಯ ಮಾಡಿದ್ದರಂತೆ. ಕೊನೆಗೆ ಪ್ರತ್ಯೇಕ ಮನೆ ಮಾಡಿ ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಈ ನಡುವೆ ಕೆಲವೇ ದಿನಗಳಲ್ಲಿ ಮನೆ ಬಿಟ್ಟು ಹೋಗಿದ್ದಳು ಎಂಬ ಆರೋಪ ಕೇಳಿ ಬಂದಿದೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

 

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement