ಚುನಾವಣೋತ್ತರ ಸಮೀಕ್ಷೆಗಳಿಂದ ಸಂಭವನೀಯ ಅತಂತ್ರ ವಿಧಾನಸಭೆ ಭವಿಷ್ಯ: ಬಿಜೆಪಿ ಅಥವಾ ಕಾಂಗ್ರೆಸ್‌ ಜೊತೆ ಮೈತ್ರಿಗೆ ಸಿದ್ಧ ಎಂದ ಕುಮಾರಸ್ವಾಮಿ, ಆದರೆ…

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ತಮ್ಮ ಪಕ್ಷವು ಕಾಂಗ್ರೆಸ್ ಅಥವಾ ಆಡಳಿತಾರೂಢ ಭಾರತೀಯ ಜನತಾ ಪಕ್ಷದೊಂದಿಗೆ ಚುನಾವಣೋತ್ತರ ಮೈತ್ರಿಗೆ ಮುಕ್ತವಾಗಿದೆ ಎಂದು ಹೇಳಿದ್ದಾರೆ.
ಶನಿವಾರದ ಮತಗಳ ಎಣಿಕೆಗೆ ಮುಂಚಿತವಾಗಿ ಅವರ ಈ ಹೇಳಿಕೆ ಬಂದಿದೆ. ಹೆಚ್ಚಿನ ಚುನಾವಣೋತ್ತರ ಅತಂತ್ರ ವಿಧಾನಸಭೆ ಹೆಚ್ಚು ಸಂಭವನೀಯ ಫಲಿತಾಂಶವೆಂದು ಸೂಚಿಸಿವೆ; ಇದರ ಬೆನ್ನಲ್ಲೇ ಕುಮಾರಸ್ವಾಮಿಯರ ಈ ಹೇಳಿಕೆ ಬಂದಿದೆ.
ಡೆಕ್ಕನ್ ಹೆರಾಲ್ಡ್ ಪ್ರಕಾರ, ಕುಮಾರಸ್ವಾಮಿ ಅವರು ಎರಡು ರಾಷ್ಟ್ರೀಯ ಪಕ್ಷಗಳಲ್ಲಿ ತಮ್ಮ ಷರತ್ತುಗಳಿಗೆ ಒಪ್ಪಿಗೆ ನೀಡಿದ ಪಕ್ಷಕ್ಕೆ ಬೆಂಬಲಿಸಲು ಸಿದ್ಧರಾಗಿದ್ದಾರೆ, ಅದರಲ್ಲಿ ಮುಖ್ಯವಾಗಿ ಮುಖ್ಯಮಂತ್ರಿ ಹುದ್ದೆಯೂ ಸೇರಿದೆ.
ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿ ಮತ ಎಣಿಕೆಗೂ ಮುನ್ನ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ. ತಮ್ಮ ಪ್ರವಾಸಕ್ಕೂ ಮುನ್ನ ಡೆಕ್ಕನ್ ಹೆರಾಲ್ಡ್ ಜೊತೆ ಮಾತನಾಡಿದ ಅವರು, ಜೆಡಿಎಸ್ ಕನಿಷ್ಠ 50 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಹಾಗೂ ನನ್ನ ಷರತ್ತುಗಳನ್ನು ಒಪ್ಪುವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧನಿದ್ದೇನೆ.
ಎಕ್ಸಿಟ್ ಪೋಲ್‌ಗಳು ಜೆಡಿಎಸ್ 30 ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಸೂಚಿಸಿದೆ. ಆದರೆ ಕಾಂಗ್ರೆಸ್ ಅಥವಾ ಬಿಜೆಪಿಯನ್ನು ಬಹುಮತದ 113 ಕ್ಕೆ ಒಯ್ಯಲು ಇದು ಸಾಕಾಗುತ್ತದೆ.ಜೆಡಿಎಸ್ ಎರಡೂ ಪಕ್ಷಗಳನ್ನು ಬೆಂಬಲಿಸಿದ ಇತಿಹಾಸವನ್ನು ಹೊಂದಿದೆ; 2006 ರಲ್ಲಿ ಬಿಜೆಪಿ ಜೊತೆ ಒಪ್ಪಂದ ಮಾಡಿಕೊಂಡು ಕುಮಾರಸ್ವಾಮಿ ಮೊದಲ ಬಾರಿಗೆ ಮುಖ್ಯಮಂತ್ರಿಯಾದರು. ೨೦೧೮ರಲ್ಲಿ ಕಾಂಗ್ರೆಸ್‌ ಪಕ್ಷದ ಬೆಂಬಲದಿಂದ ಮುಖ್ಯಮಂತ್ರಿಯಾದರು.
ಯಾರನ್ನು ಬೆಂಬಲಿಸಬೇಕು ಎಂಬ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹಿರಿಯ ಜೆಡಿಎಸ್ ನಾಯಕ ತನ್ವೀರ್ ಅಹ್ಮದ್ NDTV ಗೆ ತಿಳಿಸಿದ್ದಾರೆ. “ಸರಿಯಾದ ಸಮಯ ಬಂದಾಗ ನಾವು ಅದನ್ನು ಸಾರ್ವಜನಿಕರಿಗೆ ಪ್ರಕಟಿಸುತ್ತೇವೆ…” ಎಂದ ಅಹ್ಮದ್ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳನ್ನು ತಮ್ಮನ್ನು ತಲುಪಿವೆ ಎಂದು ಹೇಳಿದ್ದಾರೆ.
ನಾಳೆ (ಮೆ 13) ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಎಲ್ಲ ಊಹಾಪೋಹಗಳಿಗೂ ತೆರೆಬೀಳಲಿದೆ. .

ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 9ವರೆಗೂ ಭಾರಿ ಮಳೆ ಮುನ್ಸೂಚನೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement