ರಾಜ್ಯದಲ್ಲೇ ಅತಿ ದೊಡ್ಡ ಅಂತರದ ದಾಖಲೆಯ ಗೆಲುವು ಸಾಧಿಸಿದ ಡಿ.ಕೆ.ಶಿವಕುಮಾರ

ರಾಮನಗರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ತಮ್ಮ ಭದ್ರಕೋಟೆಯಾದ ಕನಕಪುರ ಕ್ಷೇತ್ರದಲ್ಲಿ ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಕಂದಾಯ ಸಚಿವರಾಗಿದ್ದ ಬಿಜೆಪಿಯ ಆರ್‌. ಅಶೋಕ್‌ ಅವರು ಬೆಂಗಲೂರಿನ ಪದ್ಮನಾಭ ನಗರದ ಜೊತೆ ಕನಕಪುರದಲ್ಲೂ ಸ್ಪರ್ಧಿಸಿದ್ದರು. ಹೀಗಾಗಿ ಕನಕಪುರ ಕ್ಷೇತ್ರ ಈ ಬಾರಿ ರಾಜ್ಯದ ಕುತೂಹಲ ಕೆರಳಿಸಿದ್ದ ಕ್ಷೇತ್ರಗಳಲ್ಲಿ ಒಂದಾಗಿತ್ತು. ಕಂದಾಯ ಸಚಿವ ಆರ್‌.ಅಶೋಕ ಅವರು ಮೂರನೇ ಸ್ಥಾನ ತಳ್ಳಲ್ಪಟ್ಟು ತೀವ್ರ ಮುಖಭಂಗ ಅನುಭವಿಸಿದರು.
ಕನಕಪುರದಲ್ಲಿ ಡಿಕೆ ಶಿವಕುಮಾರ ಅವರುದಾಖಲೆಯ 1,22,392 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಂಚೆ ಮತಗಳು ಸೇರಿ ಡಿ.ಕೆ. ಶಿವಕುಮಾರ್‌ 1,43,023 ಮತಗಳನ್ನು ಪಡೆದುಕೊಂಡಿದ್ದು, ಉಳಿದ ಎಲ್ಲ ಅಭ್ಯರ್ಥಿಗಳು ಇಲ್ಲಿ ಠೇವಣಿ ಕಳೆದುಕೊಂಡಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ನಾಗರಾಜು 20,631 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದುಕೊಂಡರೆ, ಬಿಜೆಪಿಯ ಆರ್. ಅಶೋಕ್ ಕೇವಲ 19,753 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. 2018ರಲ್ಲಿ ಶಿವಕುಮಾರ ಅವರು 79,000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಬಾರಿ ಅವರ ಗೆಲುವಿನ ಅಂತರ ಮತ್ತೂ ಹೆಚ್ಚಾಗಿದ್ದು, 1.2 ಲಕ್ಷ ದಾಟಿದೆ. ರಾಜ್ಯದಲ್ಲೇ ಅತಿ ದೊಡ್ಡ ಅಂತರದ ಗೆಲುವು ಸಾಧಿಸಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement