ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ಸಿಗೆ ಈಗ ಸಿಎಂ ಅಭ್ಯರ್ಥಿ ಆಯ್ಕೆ ಮಾಡುವುದೇ ಸದ್ಯದ ದೊಡ್ಡ ಸವಾಲು..

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣ ಭಾರತದ ತನ್ನ ಏಕೈಕ ಭದ್ರಕೋಟೆ ಕರ್ನಾಟಕವನ್ನು ಕಳೆದುಕೊಂಡಿದ್ದು, ರಾಜ್ಯದ 223 ಸ್ಥಾನಗಳಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ 65 ಮತ್ತು ಎಚ್‌ಡಿ ಕುಮಾರಸ್ವಾಮಿ ಅವರ ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿದೆ.30 ವರ್ಷಗಳ ನಂತರ ಸ್ಥಾನಗಳು ಮತ್ತು ಮತಗಳ ಹಂಚಿಕೆಯಲ್ಲಿ ಕಾಂಗ್ರೆಸ್‌ ದಾಖಲೆ ಮಾಡಿದೆ.
ಕರ್ನಾಟಕದ ಅಧಿಕಾರದ ಚುಕ್ಕಾಣಿ ಹಿಡಿಯಲು ಸಿದ್ಧವಾಗಿರುವ ಕಾಂಗ್ರೆಸ್‌ಗೆ ಮುಖ್ಯಮಂತ್ರಿ ಸ್ಥಾನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಅವರ ನಡುವೆ ಸಮತೋಲನ ಸಾಧಿಸುವುದು ದೊಡ್ಡ ಸವಾಲಾಗಿದೆ. ಇಬ್ಬರೂ ಪ್ರಬಲ ಬೆಂಬಲಿಗರನ್ನು ಹೊಂದಿರುವ ಪ್ರಬಲ ನಾಯಕರು, ಅವರು ವರ್ಷಗಳಿಂದ ಭಿನ್ನಾಭಿಪ್ರಾಯದಲ್ಲಿದ್ದರೂ ಪ್ರಚಾರಕ್ಕಾಗಿ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಫಲಿತಾಂಶ ಘೋಷಣೆಗೂ ಮುನ್ನವೇ ಮುಖ್ಯಮಂತ್ರಿ ಹುದ್ದೆಗೆ ಇಬ್ಬರು ತಮ್ಮ ಪ್ರಬಲ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಪುತ್ರ ಮತ್ತೊಮ್ಮೆ ತಮ್ಮ ತಂದೆ ಮುಖ್ಯಮಂತ್ರಿ ಹುದ್ದೆಗೆ ಏರಬೇಕು ಎಂದು ಬಯಸುತ್ತಿರುವುದಾಗಿ ಮಾಧ್ಯಮದ ಮುಂದೆ ಹೇಳಿದ್ದು, ಇದಕ್ಕೆ ಡಿ.ಕೆ ಶಿವಕುಮಾರ ಅವರು ಈ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಭಾನುವಾರ (ಮೇ 14) ಸಂಜೆ ತನ್ನ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿರುವ ಕಾಂಗ್ರೆಸ್ ತನ್ನ ಎಲ್ಲಾ ಶಾಸಕರನ್ನು ಬೆಂಗಳೂರಿಗೆ ಬರುವಂತೆ ಸೂಚಿಸಿದೆ. “ನಾವು ಅಭ್ಯರ್ಥಿಗಳಿಗೆ ಹೇಗೆ ಪ್ರತಿಕ್ರಿಯಿಸಬೇಕು ಎಂಬುದರ ಕುರಿತು ವಿವರಿಸುತ್ತೇವೆ. ಹೈಕಮಾಂಡ್ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ” ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕರ್ನಾಟಕದ ಜನತೆ ಮತ್ತು ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿದ ಕಾಂಗ್ರೆಸ್‌ನ ರಾಹುಲ್ ಗಾಂಧಿ, “ದ್ವೇಷದ ಮಾರುಕಟ್ಟೆಯನ್ನು ಮುಚ್ಚಲಾಗಿದೆ ಮತ್ತು ಪ್ರೀತಿಯ ಅಂಗಡಿಗಳು ತೆರೆದಿವೆ” ಎಂದು ಹೇಳಿದ್ದಾರೆ. “ರಾಹುಲ್ ಗಾಂಧಿ ಅವರು ನಡೆದ ಹಾದಿಯಲ್ಲಿ (ಭಾರತ್ ಜೋಡೋ ಯಾತ್ರೆಗಾಗಿ) ನಾವು ಸುಮಾರು 99% ಸ್ಥಾನಗಳನ್ನು ಗೆದ್ದಿದ್ದೇವೆ” ಎಂದು ಖರ್ಗೆ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶನಿವಾರ ಮಧ್ಯಾಹ್ನದ ನಂತರ ಸೋಲನ್ನು ಒಪ್ಪಿಕೊಂಡ ಅವರು, “ಪ್ರಧಾನಿ ಮತ್ತು ಬಿಜೆಪಿ ಕಾರ್ಯಕರ್ತರು ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ, ನಮಗೆ ಗೆಲ್ಲಲು ಸಾಧ್ಯವಾಗಲಿಲ್ಲ” ಎಂದು ಹೇಳಿದರು. “ಲೋಕಸಭಾ ಚುನಾವಣೆಯಲ್ಲಿ ಹಿಂತಿರುಗಲು ಪಕ್ಷವು ಈ ಫಲಿತಾಂಶವನ್ನು ಸವಾಲಾಗಿ ತೆಗೆದುಕೊಳ್ಳುತ್ತದೆ” ಎಂದು ಬೊಮ್ಮಾಯಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹೈ-ಪಿಚ್ ಪ್ರಚಾರ, ಕೇಂದ್ರ ಮಂತ್ರಿಗಳು ಮತ್ತು ಸರ್ಕಾರದ ಬಲದ ಹೊರತಾಗಿಯೂ ಕರ್ನಾಟಕವು ಸುಮಾರು 40 ವರ್ಷಗಳ ನಡೆದು ಬಂದ ವಾಡಿಕೆಯಂತೆ ಅಧಿಕಾರದಲ್ಲಿರುವವರನ್ನು ಮತ್ತೆ ಆಯ್ಕೆ ಮಾಡಿಲ್ಲ. ಪ್ರಧಾನಿ ಮೋದಿ ರಾಜ್ಯದಲ್ಲಿ 19 ಸಾರ್ವಜನಿಕ ಸಭೆಗಳು ಮತ್ತು ಆರು ರೋಡ್‌ಶೋಗಳನ್ನು ನಡೆಸಿದ್ದರು. ಆದರೂ ಅದು ಫಲ ನೀಡಲಿಲ್ಲ.

ಪ್ರಮುಖ ಸುದ್ದಿ :-   ನಟಿ ಸಿದ್ಧಾರ್ಥ- ನಟಿ ಅದಿತಿ ರಾವ್ ಮದುವೆ ಆಗಿಲ್ಲ : ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ; ಸ್ಪಷ್ಟನೆ ನೀಡಿದ ಅದಿತಿ

ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗಳು ಮತ್ತು ಈ ವರ್ಷಾಂತ್ಯದಲ್ಲಿ ನಡೆಯಲಿರುವ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕರ್ನಾಟಕದ ಫಲಿತಾಂಶಗಳು ಕಾಂಗ್ರೆಸ್‌ಗೆ ಸದ್ಯಕ್ಕೆ ಟಾನಿಕ್‌ ರೂಪದಲ್ಲಿ ಬಂದಿದೆ. ಪಕ್ಷವು ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಮತ್ತೆ ಅಧಿಕಾರ ನೀಡುವ ನಿರೀಕ್ಷೆ ಇಟ್ಟುಕೊಂಡಿದೆ. 2020 ರಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ನಿಷ್ಠಾವಂತರ ಪಕ್ಷಾಂತರದ ನಂತರ ಸರ್ಕಾರವು ಕುಸಿದುಬಿದ್ದ ಮಧ್ಯಪ್ರದೇಶವನ್ನು ಮರಳಿ ಗೆಲ್ಲಲು ಅದು ಬಯಸುತ್ತಿದೆ.
ಮುಂದಿನ ವರ್ಷ ನಡೆಯಲಿರುವ ರಾಷ್ಟ್ರೀಯ ಚುನಾವಣೆಯ ದೃಷ್ಟಿಯಿಂದ ಬಿಜೆಪಿಗೆ ಈ ಫಲಿತಾಂಶ ನಿರ್ಣಾಯಕವಾಗಲಿದೆ. ರಾಜ್ಯವು 28 ಲೋಕಸಭಾ ಸ್ಥಾನಗಳನ್ನು ಹೊಂದಿದೆ. 2018ಕ್ಕೆ ಹೋಲಿಸಿದರೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತಗಳಿಕೆ ಕಡಿಮೆಯಾಗಿಲ್ಲವಾದರೂ, ಒಕ್ಕಲಿಗ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮತಗಳಲ್ಲಿ ಪಕ್ಷಕ್ಕೆ ಅಗತ್ಯವಾದ ಪ್ರಗತಿ ಸಾಧಿಸಲು ಸಾಧ್ಯವಾಗಲಿಲ್ಲ ಮತ್ತು ಲಿಂಗಾಯತರ ಬೆಂಬಲವನ್ನು ಕೂಡ ಗಣನೀಯ ಪ್ರಮಾಣದಲ್ಲಿ ಕಳೆದುಕೊಂಡಿದೆ ಎಂದು ಚುನಾವಣೆಗಳು ಫಲಿತಾಂಶಗಳು ಸೂಚಿಸುತ್ತವೆ.
.

ಪ್ರಮುಖ ಸುದ್ದಿ :-   ನಿಮ್ಮವನಾಗಿದ್ದೆ...ಯಾವಾಗಲೂ ನಿಮ್ಮವನಾಗಿಯೇ ಇರ್ತೇನೆ..: ಬಿಜೆಪಿ ಟಿಕೆಟ್ ನಿರಾಕರಣೆ ನಂತ್ರ ಪಿಲಿಭಿತ್‌ ಜನತೆಗೆ ʼಹೃದಯಸ್ಪರ್ಶಿʼ ಪತ್ರ ಬರೆದ ವರುಣ ಗಾಂಧಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement