ಸಿಎಂ ಅಭ್ಯರ್ಥಿ ಆಯ್ಕೆಗೆ ಕಸರತ್ತು: ಸಿಎಲ್‌ಪಿ ಸಭೆ ನಡೆಯುತ್ತಿರುವ ಶಾಂಗ್ರಿ – ಲಾ ಹೊಟೇಲ್ ಮುಂದೆ ಡಿಕೆಶಿ-ಸಿದ್ದರಾಮಯ್ಯ ಬೆಂಬಲಿಗರ ಹೈಡ್ರಾಮಾ

posted in: ರಾಜ್ಯ | 0

ಬೆಂಗಳೂರು: ಇಂದು ಭಾನುವಾರ ಸಂಜೆ ಸಿಎಲ್‌ಪಿ ಸಭೆ ನಡೆಯುತ್ತಿರುವ ಶಾಂಗ್ರಿ – ಲಾ ಹೋಟೆಲ್ ಮುಂದೆ ಹೈಡ್ರಾಮಾ ನಡೆಯುತ್ತಿದೆ. ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಡಿ.ಕೆ.ಶಿವಕುಮಾರ ಬೆಂಬಲಿಗರು ತಮ್ಮ ತಮ್ಮ ನಾಯಕರ ಪರವಾಗಿ ಘೋಷಣೆ ಕೂಗುತ್ತಿದ್ದಾರೆ.
ಸಿದ್ದರಾಮಯ್ಯ ಫೋಟೋ ಹಿಡಿದುಕೊಂಡು ಅವರ ಬೆಂಬಲಿಗರು ಸಿದ್ದು ಮುಖ್ಯಮಂತ್ರಿ ಎಂದು ಘೋಷಣೆ ಕೂಗುತ್ತಿದ್ದರೆ, ಡಿ.ಕೆ.ಶಿವಕುಮಾರ ಬೆಂಬಲಿಗರು ಶಿವಕುಮಾರ ಮುಖ್ಯಮಂತ್ರಿ ಎಂದು ಘೋಷಣೆ ಕೂಗುತ್ತಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭಗೊಂಡಿದೆ. ಎಲ್ಲಾ ಶಾಸಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಮುಖ್ಯಮಂತ್ರಿ ಯಾರು ಎಂಬುದರ ಕುರಿತಾಗಿ ಶಾಸಕರ ಅಭಿಪ್ರಾಯ ಪಡೆಯಲಾಗುತ್ತಿದ್ದು, ಈ ಬಗ್ಗೆ ಮುಂದಿನ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ.
ಶಿವಕುಮಾರ್‌ ಮನೆಯಲ್ಲಿ ಸಭೆ
ಶಾಸಕಾಂಗ ಸಭೆಗೆ ಆಗಮಿಸಿದ ಬಹುತೇಕ ಶಾಂಗ್ರಿ-ಲಾ ಹೊಟೇಲಿಗೆ ತೆರಳುವ ಮೊದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಸೇರಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ. 15 ಕ್ಕೂ ಹೆಚ್ಚು ಶಾಸಕರು ಡಿ.ಕೆ.ಶಿವಕುಮಾರ ನಿವಾಸದಲ್ಲಿ ಸೇರಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ತಿ.ನರಸೀಪುರ ಬಳಿ ಅಪಘಾತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement