ಡಿಕೆ ಶಿವಕುಮಾರ, ಸಿದ್ದರಾಮಯ್ಯ ನಿವಾಸದ ಮುಂದೆ ಬೆಂಬಲಿಗರಿಂದ ಮುಂದಿನ ಮುಖ್ಯಮಂತ್ರಿ ಫ್ಲೆಕ್ಸ್ ಅಳವಡಿಕೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುತ್ತಿದ್ದಂತೆಯೇ ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿ ಆರಂಭವಾಗಿದೆ. ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಹಾಗೂ ಕಾಂಗ್ರೆಸ್ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರಲ್ಲಿ ಚರ್ಚೆ ಜೋರಾಗಿ ಶುರುವಾಗಿದೆ. ಅವರವರ ಬೆಂಬಲಿಗರು ತಮ್ಮ ನಾಯಕರೇ ಮುಂದಿನ ಮುಖ್ಯಮಂತ್ರಿ ಎಂದು ಫ್ಲೆಕ್ಸ್‌ ಅಳವಡಿಸಿದ್ದಾರೆ.
ಸಿದ್ದರಾಮಯ್ಯ ಅಭಿಮಾನಿಗಳು ಬೆಂಗಳೂರಿನ ಅವರ ನಿವಾಸದ ಹೊರಗೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಪೋಸ್ಟರ್ ಹಾಕಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯೇ ನಡೆಯದೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ 2ನೇ ಬಾರಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಸಿದ್ದರಾಮಯ್ಯನವರಿಗೆ ಅಭಿನಂದನೆಗಳು ಎಂದು ಪೋಸ್ಟರ್ ಹಾಕಿದ್ದಾರೆ.
ಈ ವಿಚಾರದಲ್ಲಿ ಡಿ. ಕೆ. ಶಿವಕುಮಾರ ಅವರ ಅಭಿಮಾನಿಗಳೂ ಸಹ ಇದನ್ನೇ ಮಾಡಿದ್ದಾರೆ. ಬೆಂಗಳೂರಿನ ಡಿ. ಕೆ. ಶಿವಕುಮಾರ ನಿವಾಸದ ಎದುರಿಗೆ ಮುಂದಿನ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಎಂಬ ಪೋಸ್ಟರ್ ಹಾಕಿದ್ದಾರೆ. ಕಾಂಗ್ರೆಸ್ ಪಕ್ಷದ ಗೆಲುವಿಗೆ ಅಭಿನಂದನೆ ಸಲ್ಲಿಸಿರುವ ಕಾರ್ಯಕರ್ತರು, ಮುಂದಿನ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಎಂದು ಹೇಳುತ್ತಿದ್ದಾರೆ. ಮೇ 15 ರಂದು ಡಿ. ಕೆ. ಶಿವಕುಮಾರ ಾವರ ಜನ್ಮದಿನ, ಅದೇ ದಿನ ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅಭಿಮಾನಿಗಳು ಆಶಿಸಿದ್ದಾರೆ.
ಒಟ್ಟಿನಲ್ಲಿ ಬಹುಮತ ಗಳಿಸಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿರುವ ಕಾಂಗ್ರೆಸ್ ಪಕ್ಷದಲ್ಲಿ ಇದೀಗ ಮುಖ್ಯಮಂತ್ರಿ ಪಟ್ಟದ ಪೈಪೋಟಿ ಜೋರಾಗಿದೆ. ಡಿ. ಕೆ. ಶಿವಕುಮಾರ, ಸಿದ್ದರಾಮಯ್ಯ ಪೈಕಿ ಯಾರು ಮುಖ್ಯಮಂತ್ರಿ ಆಗಲಿದ್ದಾರೆ..? ಅಥವಾ ಹೈಕಮಾಂಡ್‌ ಆಯ್ಕೆ ಯಾರು..? ಎಂಬಿತ್ಯಾದಿ ಚರ್ಚೆಗಳು ಆರಂಭವಾಗಿದೆ.

ಪ್ರಮುಖ ಸುದ್ದಿ :-   ಮಾರ್ಚ್‌ 31ರೊಳಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬದಲಾವಣೆ ಮಾಡಿ : ಬಿಜೆಪಿ ಹೈಕಮಾಂಡಿಗೆ ಮಠಾಧೀಶರ ಗಡುವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement