ಸಿಎಂ ಸ್ಥಾನಕ್ಕೆ ಬಿಗಿಪಟ್ಟು ಹಿಡಿದಿದ್ದ ಡಿ.ಕೆ.ಶಿವಕುಮಾರ : ಕೊನೆ ಕ್ಷಣದಲ್ಲಿ ಮನವೊಲಿಸಿದ್ದು ಯಾರು..?

ನವದೆಹಲಿ: ಸುದೀರ್ಘ ಸಮಾಲೋಚನೆಯ ಬಳಿಕವೂ ಬಗ್ಗದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು, ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಧ್ಯಸ್ಥಿಕೆಯ ನಂತರ ಉಪಮುಖ್ಯಮಂತ್ರಿ ಹುದ್ದೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.
ಪಕ್ಷದ ಮೂಲಗಳು ಹೇಳುವಂತೆ ಕಾಂಗ್ರೆಸ್ ವರಿಷ್ಠರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ, ಶಿವಕುಮಾರ ಅವರ ಉಪಮುಖ್ಯಮಂತ್ರಿಯಾಗಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಶಿವಕುಮಾರ ಅವರು ನಿನ್ನೆ ಸಂಜೆ ತಡರಾತ್ರಿ ಸೋನಿಯಾ ಗಾಂಧಿ ಅವರು ಮಾತನಾಡಿದ ನಂತರ ಉಪಮುಖ್ಯಮಂತ್ರಿ ಸ್ಥಾನವನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಶಿವಕುಮಾರ ಅವರು “ತ್ಯಾಗ” ಮಾಡಲು ನಿರ್ಧರಿಸಿದ್ದಾರೆ ಮತ್ತು ಪಕ್ಷದ ಹಿತದೃಷ್ಟಿಯಿಂದ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಲು ಒಪ್ಪಿಕೊಂಡಿದ್ದಾರೆ ಎಂದು ಶಿವಕುಮಾರ ಅವರ ಆಪ್ತ ಮೂಲಗಳು ತಿಳಿಸಿವೆ. ಸೋನಿಯಾ ಗಾಂಧಿ ಅವರು ಬುಧವಾರ ಸಂಜೆ ನಂತರ ಶಿವಕುಮಾರ ಅವರೊಂದಿಗೆ ಮಾತನಾಡಿದ್ದಾರೆ. ನಂತರ ಅವರು ಡಿಸಿಎಂ ಸ್ಥಾನಕ್ಕೆ ಒಪ್ಪಿಕೊಂಡರು ಎಂದು ಮೂಲಗಳು ತಿಳಿಸಿವೆ.

ಡಿಕೆ ಶಿವಕುಮಾರ ಅವರ ಸಹೋದರ ಡಿ.ಕೆ.ಸುರೇಶ ಅವರು, ಕಾಂಗ್ರೆಸ್ ನಾಯಕತ್ವವು ಕರ್ನಾಟಕದ ಹಿತದೃಷ್ಟಿಯಿಂದ ಈ ವ್ಯವಸ್ಥೆ ಕಲ್ಪಿಸಿದೆ, ಆದರೆ ಅದು ಅವರಿಗೆ ಸಂತೋಷವನ್ನು ನೀಡಿಲ್ಲ. ಆದರೂ ಪಕ್ಷದ ಹಿತಕ್ಕಾಗಿ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಕರ್ನಾಟಕ ಮತ್ತು ಪಕ್ಷದ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ… ನನ್ನ ಸಹೋದರ ಮುಖ್ಯಮಂತ್ರಿಯಾಗಲು ಬಯಸಿದ್ದರು, ಆದರೆ ಅವರು ಆಗಲಿಲ್ಲ. ಈ ನಿರ್ಧಾರದಿಂದ ನಮಗೆ ಸಂತೋಷ ಇಲ್ಲ, ಆದರೆ ಪಕ್ಷದ ಹಿತದೃಷ್ಟಿಯಿಂದ ಒಪ್ಪಿಕೊಂಡಿದ್ದಾರೆ” ಎಂದು ಎನ್‌ಡಿಟಿವಿಗೆ ತಿಳಿಸಿದ್ದಾರೆ.
ಇಂದು, ಗುರುವಾರ ಸಂಜೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಪ್ರಮುಖ ಸಭೆಯ ನಂತರ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ. ಶನಿವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಎಲ್ಲಾ ಸಮಾನ ಮನಸ್ಕ ಪಕ್ಷಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ. ಅಧಿಕಾರ ಹಂಚಿಕೆ ವ್ಯವಸ್ಥೆಯನ್ನು ಉತ್ತಮಗೊಳಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ಸಿದ್ದರಾಮಯ್ಯ ಮತ್ತು ಶಿವಕುಮಾರ ಇಬ್ಬರೂ ನಿನ್ನೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಅವರನ್ನು ಭೇಟಿ ಮಾಡಿದ್ದರು. ಅವರಿಬ್ಬರೂ ಮುಖ್ಯಮಂತ್ರಿ ಸ್ಥಾನಕ್ಕಾಗಿ ಇಬ್ಬರು ತಮ್ಮ ಹಕ್ಕು ಮಂಡಿಸಿದ್ದರು. ಖರ್ಗೆ ಅವರ ನಿವಾಸದ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕ್ಯಾಬಿನೆಟ್ ಘೋಷಣೆಗೆ 48ರಿಂದ ೭೨ ಗಂಟೆಗಳನ್ನು ತೆಗೆದುಕೊಳ್ಳಬಹುದು ಎಂದು ಹೇಳಿದ್ದರು.
ಶಿವಕುಮಾರ ಅವರು ತಮ್ಮ ಬಲವಾದ ಸಾಂಸ್ಥಿಕ ಸಾಮರ್ಥ್ಯಗಳಿಗೆ ಹೆಸರುವಾಸಿಯಾಗಿದ್ದಾರೆ ಮತ್ತು ಕಠಿಣ ಸಮಯದಲ್ಲಿ ಸಂಪನ್ಮೂಲ ಮತ್ತು ಕಾಂಗ್ರೆಸ್ಸಿನ ಟ್ರಬಲ್‌ ಶೂಟರ್ ಎಂದು ಪರಿಗಣಿಸಲ್ಪಟ್ಟಿದ್ದಾರೆ. ಶಿವಕುಮಾರ ಅವರು ಕಳೆದ ನಾಲ್ಕು ವರ್ಷಗಳಿಂದ ತಮ್ಮ ಸಂಘಟನಾತ್ಮಕ ಕೆಲಸ ಉಲ್ಲೇಖಿಸಿ ಉನ್ನತ ಹುದ್ದೆಗೆ ಪಟ್ಟು ಹಿಡಿದಿದ್ದರು.
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯಲ್ಲಿ 135 ಸ್ಥಾನಗಳನ್ನು ಗಳಿಸಿದೆ. ಬಿಜೆಪಿ 66 ಸ್ಥಾನಗಳನ್ನು ಗೆದ್ದಿದ್ದರೆ, ಎಚ್‌.ಡಿ. ಕುಮಾರಸ್ವಾಮಿ ಅವರ ಜೆಡಿಎಸ್‌ 19 ಸ್ಥಾನಗಳನ್ನು ಗೆದ್ದಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement