ನಾನು ಡಿಸಿಎಂ ಆಕಾಂಕ್ಷಿ, ನನಗೆ ಕೊಡಬೇಕು : ಡಾ.ಜಿ ಪರಮೇಶ್ವರ ಒತ್ತಾಯ

ಬೆಂಗಳೂರು: ಉಪಮುಖ್ಯಮಂತ್ರಿ ಸ್ಥಾನ ಕೇಳುವುದು ಏನಿದೆ, ನನಗೆ ಕೊಡಬೇಕು ಎಂದು ಡಾ.ಜಿ ಪರಮೇಶ್ವರ ಹೇಳಿದ್ದಾರೆ.
ಮಾಜಿ ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರಾಗಿ (ಎಂಟು ವರ್ಷಗಳು) ಸುದೀರ್ಘ ಸೇವೆ ಸಲ್ಲಿಸಿರುವ ಪರಮೇಶ್ವರ ಅವರ ಪ್ರತಿಕ್ರಿಯೆ ಸಿದ್ದರಾಮಯ್ಯ ಮುಖ್ಯಮಂತ್ರಿ ಮತ್ತು ಡಿ.ಕೆ. ಶಿವಕುಮಾರ ಅವರ ಏಕೈಕ ಉಪಮುಖ್ಯಮಂತ್ರಿ ನೇಮಕ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಘೋಷಿಸಿದ ಕೆಲವೇ ಗಂಟೆಗಳ ನಂತರ ಬಂದಿದೆ.
ಶಿವಕುಮಾರ ಅವರೊಬ್ಬರೇ ಉಪಮುಖ್ಯಮಂತ್ರಿ ಆಗಬೇಕು ಎಂದು ನಾಯಕತ್ವಕ್ಕೆ ಷರತ್ತಿನ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಮೇಶ್ವರ ಅವರು, ಶಿವಕುಮಾರ ಅವರ ದೃಷ್ಟಿಯಲ್ಲಿ ಅವರು ಹೇಳಿದ್ದು ಸರಿಯಾಗಬಹುದು, ಆದರೆ ಹೈಕಮಾಂಡ್ ದೃಷ್ಟಿಕೋನ ಬೇರೆಯಾಗಿರಬೇಕು. ನಾವು ಅವರನ್ನು (ಹೈಕಮಾಂಡ್) ಹೆಚ್ಚಿನದನ್ನು ನಿರೀಕ್ಷಿಸುತ್ತೇವೆ…”ಎಂದು ಹೇಳಿದರು.

ಕಾಂಗ್ರೆಸ್‌ ಬಗ್ಗೆ ಜನರಲ್ಲಿಅದರಲ್ಲೂ ದಲಿತ ಸಮುದಾಯದಲ್ಲಿ ಅಪಾರ ನಿರೀಕ್ಷೆ ಇದೆ. ಈ ನಿರೀಕ್ಷೆಗಳನ್ನು ಅರ್ಥಮಾಡಿಕೊಂಡು ನಮ್ಮ ನಾಯಕತ್ವವು ನಿರ್ಧಾರ ತೆಗೆದುಕೊಳ್ಳಬೇಕು. ದಲಿತರ ಮೀಸಲಿನ 51 ಕ್ಷೇತ್ರಗಳ ಪೈಕಿ 37 ಕ್ಷೇತ್ರದಲ್ಲಿ ದಲಿತರು ಗೆದ್ದಿದ್ದೇವೆ. ಬೇರೆ ಕ್ಷೇತ್ರದಲ್ಲೂ ದಲಿತ ಸಮುದಾಯದ ಮತಗಳು ಪರಿಣಾಮ ಬೀರಿವೆ ಎಂದರು‌.
ಅದು ಆಗದಿದ್ದರೆ ಸಹಜವಾಗಿಯೇ ಅದಕ್ಕೆ ಪ್ರತಿಕ್ರಿಯೆಗಳು ಬರುತ್ತವೆ. ಅದನ್ನು ನಾನು ಹೇಳುವ ಅಗತ್ಯವಿಲ್ಲ. ಈಗಲೇ ಅದನ್ನು ಸರಿಪಡಿಸದಿದ್ದರೆ ಪಕ್ಷಕ್ಕೆ ತೊಂದರೆಯಾಗಬಹುದು, ಅದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಲು ಬಯಸುತ್ತೇನೆ ಎಂದು ಪರಮೇಶ್ವರ ಹೇಳಿದರು.
ನಾನು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದೆ. ಆದರೆ ಈಗ ನಾವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರಬೇಕು, ಆದ್ದರಿಂದ ಮುಂದಿನ ದಿನಗಳಲ್ಲಿ ಅವರು ಏನು ಮಾಡುತ್ತಾರೆ ಎಂಬುದನ್ನು ನೋಡೋಣ, ಸದ್ಯಕ್ಕೆ ಅವರು ಇಬ್ಬರ ಬಗ್ಗೆ ಘೋಷಣೆ ಮಾಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವೇಳೆ ಯಾವ ರೀತಿ ನ್ಯಾಯ ಕೊಡಿಸುತ್ತಾರೋ ಕಾದು ನೋಡಬೇಕಿದೆ ಎಂದರು.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

ಸಿದ್ದರಾಮಯ್ಯ ಅವರು ನಮ್ಮ ಪಕ್ಷದಿಂದ ಎರಡನೇ ಬಾರಿಗೆ ಮುಖ್ಯಮಂತ್ರಿ ಆಗುತ್ತಿದ್ದಾರೆ, ಅವರು ಉತ್ತಮ ಆಡಳಿತ ನೀಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೇವೆ, ಭರವಸೆ ನೀಡಿರುವುದರಿಂದ ಜನರ ನಿರೀಕ್ಷೆಗಳು ನಮ್ಮ ಮೇಲೆ ಭಾರಿ ಪ್ರಮಾಣದಲ್ಲಿವೆ. ನಮ್ಮ ಪ್ರಣಾಳಿಕೆಯಲ್ಲಿ ಉತ್ತಮ ಆಡಳಿತದ ಬಗ್ಗೆ ಹೇಳಿದ್ದೇವೆ. ಉತ್ತಮ ಆಡಳಿತ ನೀಡುವಲ್ಲಿ ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆ ಎಂದು ನಿರೀಕ್ಷಿಸುತ್ತೇನೆ ಎಂದರು.
ತುಮಕೂರು ಜಿಲ್ಲೆಯ ಕೊರಟಗೆರೆಯನ್ನು ಪ್ರತಿನಿಧಿಸುವ ಪರಮೇಶ್ವರ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ 2013ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಆಗ ಅವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದರು, ಆದರೆ ಅವರು ಸೋತಿದ್ದರಿಂದ ಸಿದ್ದರಾಮಯ್ಯ ಸರ್ಕಾರದಲ್ಲಿ (2013-2018) ಎಂಎಲ್‌ಸಿ ಮತ್ತು ಸಚಿವರಾದರು.

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement