ಕ್ಷುಲ್ಲಕ ಕಾರಣಕ್ಕೆ ಮದುವೆ ವೇಳೆ ವಿಷ ಕುಡಿದ ಜೋಡಿ; ವರ ಸಾವು, ವಧು ಗಂಭೀರ

ಇಂದೋರ್‌: ಬಹಳ ವರ್ಷಗಳ ಕಾಯುವಿಕೆ ನಂತರ ವಿವಾಹ ಆಗುತ್ತಿರುವುದಕ್ಕೆ ನವ ಜೋಡಿಯೊಂದು ತಾಳಿ ಕಟ್ಟುವ ಮುನ್ನವೇ ಹಸೆಮಣೆ ಮೇಲೆ ವಿಷ ಸೇವಿಸಿರುವ ಘಟನೆ ಮಧ್ಯಪ್ರದೇಶ ಇಂದೋರ್‌ ನಗರದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ವಿಷ ಸೇವನೆಯಿಂದ 21 ವರ್ಷದ ವರ ಮೃತಪಟ್ಟಿದ್ದು, 20 ವರ್ಷದ ವಧುವಿನ ಸ್ಥಿತಿ ಗಂಭೀರವಾಗಿದೆ. ಘಟನೆ ಮೇ 16 ರಂದು ನಡೆದಿದೆ.
ಮಧ್ಯಪ್ರದೇಶ ಇಂದೋರಿನಲ್ಲಿ ಈ ಘಟನೆ ನಡೆದಿದ್ದು, ವಧು-ವರರ ಮಧ್ಯೆ ಜಗಳವಾಗಿ ವರ ಮೊದಲು ವಿಷಯ ಸೇವಿಸಿದ್ದಾನೆ ಎನ್ನಲಾಗಿದೆ. ವಿಷ ಸೇವಿಸಿದ ವಧು, ವರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ವರ ಮೃತಪಟ್ಟಿದ್ದು, ವಧು ಜೀವನ್ಮರಣ ಹೋರಾಟ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕನಾಡಿಯಾ ಪ್ರದೇಶದ ಆರ್ಯ ಸಮಾಜ ದೇವಾಲಯದಲ್ಲಿ ವಿವಾಹ ಸಮಾರಂಭ ನಡೆಯುವ ವೇಳೆ ವಧು, ವರರ ನಡುವೆ ವಿವಾಹದ ಕುರಿತು ವಾಗ್ವಾದ ನಡೆದಿದೆ. ಬಳಿಕ ವರ ತಾನು ವಿಷ ಸೇವಿಸಿರುವುದಾಗಿ ವಧುವಿಗೆ ತಿಳಿಸಿದ್ದಾನೆ. ಆಗ ವಧು ಸಹ ವಿಷ ಸೇವಿಸಿದ್ದಾಳೆ” ಎಂದು ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ (ಎಎಸ್‌ಐ) ರಂಜಾನ್ ಖಾನ್‌ ಸುದ್ದಿಗಾರರಿಗೆ ತಿಳಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ವಾಟ್ಸಾಪ್‌ನಲ್ಲಿ ಶರದ್ ಪವಾರ್‌ಗೆ ಬೆದರಿಕೆ : ಗೃಹ ಸಚಿವರ ಮಧ್ಯಸ್ಥಿಕೆ ಕೋರಿದ ಸಂಸದೆ ಸುಪ್ರಿಯಾ ಸುಳೆ

ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ವರ ಮೃತಪಟ್ಟಿರುವುದಾಗಿ ಘೋಷಿಸಿದರು. ವಧು ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ” ಎಂದು ಅವರು ಹೇಳಿದರು.
ಯುವತಿಯು ಯುವಕನನ್ನು ಮದುವೆಯಾಗುವಂತೆ ಹಲವು ದಿನಗಳಿಂದ ಪೀಡಿಸುತ್ತಿದ್ದಳು. ತನ್ನ ವೃತ್ತಿಯಲ್ಲಿ ಮೇಲೆ ಬರಲು ಎರಡು ವರ್ಷ ಕಾಲಾವಕಾಶ ಬೇಕು ಎಂದು ಯುವಕ ಹೇಳಿದ್ದ. ಇದರಿಂದ ಸಿಟ್ಟಿಗೆದ್ದ ಯುವತಿ ಯುವಕನ ಮೇಲೆ ಪೊಲೀಸರಿಗೆ ದೂರು ನೀಡಿದ್ದಳು. ಕೊನೆಗೆ ಮನಸ್ಸಿಲ್ಲದ ಮನಸ್ಸಿನಿಂದ ಮದುವೆಗೆ ಒಪ್ಪಿಗೆ ಸೂಚಿಸಿದ್ದಾನೆ ಎಂದು ಹೇಳಲಾಗಿದೆ. ಈ ವಿಚಾರ ಮದುವೆ ವೇಳೆ ಮತ್ತೆ ಪ್ರಸ್ತಾಪವಾಗಿ ವಾಗ್ವಾದ ಉಂಟಾಯಿತು ಎಂದು ವರನ ಕುಟುಂಬ ಸದಸ್ಯರು ತಿಳಿಸಿದರು ಎಂದು ಪೊಲೀಸರು ಮಾಹಿತಿ ನೀಡಿದರು.
ಮಧ್ಯಪ್ರದೇಶ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ವಧು ಮತ್ತು ವರನ ಕಡೆಯವರ ವಿಚಾರಣೆ ನಡೆಸಿದ್ದಾರೆ. ಶೀಘ್ರವೇ ಇಬ್ಬರ ಆತ್ಮಹತ್ಯೆಗೆ ಕಾರಣ ಏನೆಂಬುದು ಗೊತ್ತಾಗಲಿದೆ ಎಂದು ಪೊಲೀಸರು ಹೇಳಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಜೂನ್ 23 ರಂದು ನಿತೀಶ್ ಕುಮಾರ್ ಕರೆದ ವಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳುವೆ: ಶರದ್ ಪವಾರ್

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement