ತನ್ನ ವಿರುದ್ಧದ ಸಿಬಿಐ ಎಫ್‌ಐಆರ್ ರದ್ದು ಕೋರಿ ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಿದ ಸಮೀರ ವಾಂಖೆಡೆ

ಮುಂಬೈ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮಾಜಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಶುಕ್ರವಾರ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹಾಗೂ 2021ರಲ್ಲಿ ಕಾರ್ಡೆಲಿಯಾ ಕ್ರೂಸ್ ಡ್ರಗ್ ಪ್ರಕರಣದಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನಕ್ಕೆ ಸಂಬಂಧಿಸಿದಂತೆ 25 ಕೋಟಿ ರೂಪಾಯಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿದ್ದಾರೆ.
ಇಂದು ಮಧ್ಯಾಹ್ನ 2:30ಕ್ಕೆ ತುರ್ತು ವಿಚಾರಣೆಗೆ ಅವಕಾಶ ನೀಡಲಾಗಿದೆ. ಹೈಕೋರ್ಟ್‌ನ ರಜಾಕಾಲದ ಪೀಠದ ಮುಂದೆ ಸಲ್ಲಿಸಿದ ಅರ್ಜಿಯಲ್ಲಿ, ಆರ್ಯನ್ ಖಾನ್ ಪ್ರಕರಣದಲ್ಲಿ ಸೇಡು ತೀರಿಸಿಕೊಳ್ಳಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಸಿಬಿಐನ ಪ್ರಥಮ ಮಾಹಿತಿ ವರದಿಗೆ (ಎಫ್‌ಐಆರ್) ಸಂಬಂಧಿಸಿ ಯಾವುದೇ ಬಲವಂತದ ಕ್ರಮವನ್ನು ತಮ್ಮ ವಿರುದ್ಧ ತೆಗೆದುಕೊಳ್ಳಬಾರದು ಎಂದು ವಾಂಖೆಡೆ ಕೋರಿದ್ದಾರೆ.
ಮುಂಬೈ ಕ್ರೂಸ್‌ನಲ್ಲಿ ಎನ್‌ಸಿಬಿ 2021 ರ ಹೈ-ಪ್ರೊಫೈಲ್ ದಾಳಿಯ ನಂತರ ಡ್ರಗ್ಸ್‌ ಪ್ರಕರಣ ಬೆಳಕಿಗೆ ಬಂದಿತ್ತು, ನಂತರ ಏಜೆನ್ಸಿಯು ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ಮತ್ತು 19 ಇತರರನ್ನು ಬಂಧಿಸಿತು ಮತ್ತು ಕೆಲವು ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ಹೇಳಿಕೊಂಡಿದೆ. ನಂತರ ಎನ್‌ಸಿಬಿ ಆರ್ಯನ್ ಖಾನ್‌ಗೆ ಕ್ಲೀನ್ ಚಿಟ್ ನೀಡಿತ್ತು.
ಈ ಹಿಂದೆ ಸಿಬಿಐ ಸಮೀರ್ ವಾಂಖೆಡೆ ಸೇರಿದಂತೆ ಇತರರ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಿತ್ತು. ಮೇ 12 ರಂದು ಮುಂಬೈ, ರಾಂಚಿ, ಕಾನ್ಪುರ, ದೆಹಲಿ ಸೇರಿದಂತೆ 29 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಸಮೀರ್ ವಾಂಖೆಡೆ ಮತ್ತು ಇತರ 4 ಮಂದಿ ವಿರುದ್ಧ ಭ್ರಷ್ಟಾಚಾರ ತಡೆ ಮತ್ತು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಮುಖ ಸುದ್ದಿ :-   ನಿಮ್ಮವನಾಗಿದ್ದೆ...ಯಾವಾಗಲೂ ನಿಮ್ಮವನಾಗಿಯೇ ಇರ್ತೇನೆ..: ಬಿಜೆಪಿ ಟಿಕೆಟ್ ನಿರಾಕರಣೆ ನಂತ್ರ ಪಿಲಿಭಿತ್‌ ಜನತೆಗೆ ʼಹೃದಯಸ್ಪರ್ಶಿʼ ಪತ್ರ ಬರೆದ ವರುಣ ಗಾಂಧಿ

ಎನ್‌ಸಿಬಿಯಿಂದ ದಾಖಲಾದ ಪ್ರಕರಣ ಸಂಖ್ಯೆ 94/2021 ಇತ್ಯರ್ಥಕ್ಕೆ ಬದಲಾಗಿ ಅವರು ಲಂಚವನ್ನು ಕೇಳಿದ್ದರುಅ ಎಂದು ಆರೋಪಿಸಲಾಗಿದೆ.
ತನಿಖೆಯ ನಂತರ, ಎನ್‌ಸಿಬಿಯ ವಿಜಿಲೆನ್ಸ್ ತಂಡವು ಈ ಬಗ್ಗೆ ತನಿಖೆ ನಡೆಸುವಂತೆ ಸಿಬಿಐಗೆ ಮನವಿ ಮಾಡಿತು. ನಂತರ, ಎನ್‌ಸಿಬಿಯ ದೂರಿನ ಮೇರೆಗೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಲಂಚಕ್ಕೆ ಸಂಬಂಧಿಸಿದ ನಿಬಂಧನೆಗಳ ಅಡಿಯಲ್ಲಿ ಸಿಬಿಐ ವಾಂಖೆಡೆ ಮತ್ತು ಇತರರ ವಿರುದ್ಧ ಕ್ರಿಮಿನಲ್ ಪಿತೂರಿ ಮತ್ತು ಸುಲಿಗೆ ಬೆದರಿಕೆ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಿತು.
ಕಾರ್ಡೆಲಿಯಾ ಕ್ರೂಸ್ ಆರ್ಯನ್ ಖಾನ್ ಪ್ರಕರಣದಲ್ಲಿ ವಾಂಖೆಡೆ ಮತ್ತು ಇತರರು 25 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದಾರೆ ಮತ್ತು 50 ಲಕ್ಷ ರೂಪಾಯಿಗಳನ್ನು ಸುಲಿಗೆಯಾಗಿ ತೆಗೆದುಕೊಂಡಿದ್ದಾರೆ ಎಂದು ಸಿಬಿಐ ತನ್ನ ಎಫ್‌ಐಆರ್‌ನಲ್ಲಿ ಆರೋಪಿಸಿದೆ.
ಮುಂಬೈ ಎನ್‌ಸಿಬಿಯ ಮಾಜಿ ವಲಯ ನಿರ್ದೇಶಕ ಸಮೀರ್ ವಾಂಖೆಡೆಗೆ ಸಿಬಿಐ ಬುಧವಾರ ಸಮನ್ಸ್ ಜಾರಿ ಮಾಡಿದ್ದು, ಮೇ 18ರಂದು ತಮ್ಮ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಸ್ಟಾರ್ ಕಿಡ್ ಆರ್ಯನ್ ಖಾನ್ ಅವರ ಡ್ರಗ್ಸ್ ಕ್ರೂಸ್ ವಿಚಾರದಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮುಂಬೈ ಕಚೇರಿಗೆ ಹಾಜರಾಗುವಂತೆ ತನಿಖಾ ಸಂಸ್ಥೆ ಸೂಚಿಸಿತ್ತು. .ಆದಾಗ್ಯೂ, ದೆಹಲಿ ಹೈಕೋರ್ಟ್ ಮೇ 17 ರಂದು ವಾಂಖೆಡೆಗೆ ಬಲವಂತದ ಕ್ರಮದಿಂದ ಐದು ದಿನಗಳ ಕಾಲ ರಕ್ಷಣೆ ನೀಡಿತು

ಪ್ರಮುಖ ಸುದ್ದಿ :-   2 ಕ್ಷೇತ್ರಗಳಲ್ಲಿ ಒಂದೇ ಪಕ್ಷದ ತಲಾ ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ;ತಾವೇ ಅಧಿಕೃತ ಅಭ್ಯರ್ಥಿಗಳೆಂದು ಹಕ್ಕು ಮಂಡನೆ...!

5 / 5. 1

ಶೇರ್ ಮಾಡಿ :

  1. Dr SADANANDA HEGGADAL MATH

    ಸರಿಯಾಗಿದೆ. ಆಗ CBI ಅಥವಾ Vigilance ಮುಖ್ಯಸ್ಥರು ನ್ಯಾಯಾಲಯದ ಗಮನಕ್ಕೇಕೆ ತರಲಿಲ್ಲ! ಯಾರದೋ ಒತ್ತಡಕ್ಕೆ ಬಲಿಪಶು ಮಾಡಲಾಗುತ್ತಿದೆಯೇ!? ಅನುಮಾನ ಬಂದಿದೆ. ಹೀಗಾಗಿ vigilance ವಿಭಾಗದ ಮುಖ್ಯಸ್ಥನೂ ಹೊಣೆಗಾರನಲ್ಲವೇ!? ನ್ಯಾಯಾಲಯಕ್ಕೆ ಸತ್ಯವನ್ನು ಮರೆಮಾಚಿದುದಕ್ಕೆ!. ಆವಾಗಲೇ ಈ ಸತ್ಯವನ್ನು ಹೇಳುದ್ದರೆ ನ್ಯಾಯಾಲಯವೇ ಸಮೀರ್ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆದೇಶ ಮಾಡಬೇಕೆಂದು ಕೋರಬಹುದಿತ್ತಲ್ಲವೇ!?

ನಿಮ್ಮ ಕಾಮೆಂಟ್ ಬರೆಯಿರಿ

advertisement