ವಿವಾದಿತ ಪ್ರದೇಶ : ಕಾಶ್ಮೀರದಲ್ಲಿ ನಡೆಯಲಿರುವ ಜಿ20 ಸಭೆ ವಿರೋಧಿಸಿದ ಚೀನಾ, ಸಭೆಗೆ ಗೈರಾಗಲು ನಿರ್ಧಾರ

ನವದೆಹಲಿ: ಪಾಕಿಸ್ತಾನದೊಂದಿಗೆ ಜಂಟಿ ಹೇಳಿಕೆಯಲ್ಲಿ ಚೀನಾವು ಕಾಶ್ಮೀರ ವಿವಾದವನ್ನು ಕೆದಕಿದ ಕೆಲವು ದಿನಗಳ ನಂತರ, ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ವಾರ ನಡೆಯಲಿರುವ ಜಿ 20 ಪ್ರವಾಸೋದ್ಯಮ ವರ್ಕಿಂಗ್ ಗ್ರೂಪ್ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದೆ. ಚೀನಾದ ವಿದೇಶಾಂಗ ಸಚಿವಾಲಯವು ಹೇಳಿಕೆಯಲ್ಲಿ “ವಿವಾದಿತ ಪ್ರದೇಶದಲ್ಲಿ” ಇಂತಹ ಸಭೆಗಳನ್ನು ನಡೆಸುವುದನ್ನು “ದೃಢವಾಗಿ ವಿರೋಧಿಸುತ್ತೇವೆʼ ಎಂದು ಹೇಳಿದ್ದಾರೆ.
ವಿವಾದಿತ ಪ್ರದೇಶದಲ್ಲಿ ಯಾವುದೇ ರೀತಿಯ ಜಿ20 ಸಭೆಗಳನ್ನು ನಡೆಸುವುದನ್ನು ಚೀನಾ ದೃಢವಾಗಿ ವಿರೋಧಿಸುತ್ತದೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್‌ಬಿನ್ ಬೀಜಿಂಗ್‌ನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.”ನಾವು ಅಂತಹ ಸಭೆಗಳಿಗೆ ಹಾಜರಾಗುವುದಿಲ್ಲ” ಎಂದು ಅವರು ಹೇಳಿದರು.
ಭಾರತವು ಮೇ 22 ರಿಂದ ಮೇ 24 ರವರೆಗೆ ಜಮ್ಮು ಮತ್ತು ಕಾಶ್ಮೀರದ ಬೇಸಿಗೆಯ ರಾಜಧಾನಿ ಶ್ರೀನಗರದಲ್ಲಿ ಮೂರನೇ ಜಿ 20 ಪ್ರವಾಸೋದ್ಯಮ ವರ್ಕಿಂಗ್ ಗ್ರೂಪ್ ಸಭೆಯನ್ನು ಆಯೋಜಿಸಲಿದೆ.
ಶ್ರೀನಗರದಲ್ಲಿ ನಡೆಯಲಿರುವ ಜಿ20 ಸಭೆಯು ಜಮ್ಮು ಮತ್ತು ಕಾಶ್ಮೀರಕ್ಕೆ ತನ್ನ ನೈಜ ಸಾಮರ್ಥ್ಯವನ್ನು ಪ್ರದರ್ಶಿಸಲು “ದೊಡ್ಡ ಅವಕಾಶ” ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಬುಧವಾರ ಹೇಳಿದ್ದಾರೆ. ಶ್ರೀನಗರದಲ್ಲಿ ನಡೆಯುತ್ತಿರುವ ಇಂತಹ ಅಂತಾರಾಷ್ಟ್ರೀಯ ಕಾರ್ಯಕ್ರಮವು ದೇಶ ಮತ್ತು ಜಗತ್ತಿನಾದ್ಯಂತ ಸಕಾರಾತ್ಮಕ ಸಂದೇಶವನ್ನು ರವಾನಿಸುತ್ತದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ತಪ್ಪು ಮಾಹಿತಿ ನೀಡಲಾಗಿದೆ : ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಮೋದಿ ಭೇಟಿಗೆ ಸಮಯಾವಕಾಶ ಕೋರಿ ಬಹಿರಂಗ ಪತ್ರ ಬರೆದ ಖರ್ಗೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಜಿ20 ಸಭೆ ನಡೆಸುವ ಭಾರತದ ನಿರ್ಧಾರವನ್ನು ಪಾಕಿಸ್ತಾನವೂ ವಿರೋಧಿಸಿದೆ. ಭಾರತ ತನ್ನ ನೆರೆಯ ರಾಷ್ಟ್ರದ ಆಕ್ಷೇಪಗಳನ್ನು ತಳ್ಳಿಹಾಕಿದೆ. ಶೃಂಗಸಭೆಯಲ್ಲಿ ಭಾಗವಹಿಸದಿರುವ ಚೀನಾದ ನಿರ್ಧಾರವು ಅದರ ನಿಕಟ ಮಿತ್ರರಾಷ್ಟ್ರ ಪಾಕಿಸ್ತಾನದ ಆಕ್ಷೇಪಣೆಗಳಿಗೆ ಸಂಬಂಧಿಸಿದೆ ಮತ್ತು ಮಾರ್ಚ್‌ನಲ್ಲಿ ಅರುಣಾಚಲ ಪ್ರದೇಶದಲ್ಲಿ ನಡೆದ ಜಿ 20 ಸಭೆಯಲ್ಲಿ ಭಾಗವಹಿಸದ ನಂತರ ಇದು ಬಂದಿದೆ.
ಈ ತಿಂಗಳ ಆರಂಭದಲ್ಲಿ, ಚೀನಾ ಮತ್ತು ಪಾಕಿಸ್ತಾನ ಜಂಟಿ ಹೇಳಿಕೆಯಲ್ಲಿ ಕಾಶ್ಮೀರ ಸಮಸ್ಯೆಯನ್ನು ಸರಿಯಾಗಿ ಮತ್ತು ಶಾಂತಿಯುತವಾಗಿ “ವಿಶ್ವಸಂಸ್ಥೆ ಚಾರ್ಟರ್, ಸಂಬಂಧಿತ ಭದ್ರತಾ ಮಂಡಳಿಯ ನಿರ್ಣಯಗಳು ಮತ್ತು ದ್ವಿಪಕ್ಷೀಯವಾಗಿ ಪರಿಹರಿಸಬೇಕು” ಎಂದು ತಮ್ಮ ನಿಲುವನ್ನು ಪುನರುಚ್ಚರಿಸಿತ್ತು.
ಪಾಕಿಸ್ತಾನದ ರಕ್ಷಣೆಗೆ ಧಾವಿಸಿದ ಚೀನಾ, ಭಾರತ ಮತ್ತು ಪಾಕಿಸ್ತಾನ ನಡುವಿನ ಕಾಶ್ಮೀರ ವಿವಾದವನ್ನು ಯಾವುದೇ ಏಕಪಕ್ಷೀಯ ಕ್ರಮವನ್ನು ತಪ್ಪಿಸುವ ಮೂಲಕ ವಿಶ್ವಸಂಸ್ಥೆಯ ನಿರ್ಣಯಗಳ ಪ್ರಕಾರ ಪರಿಹರಿಸಬೇಕು ಎಂದು ಹೇಳಿತ್ತು.
ನವದೆಹಲಿಯಲ್ಲಿ ನಡೆದ ಎಸ್‌ಸಿಒ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವರು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಅವರಿಗೆ ಜಿ 20 ಗೂ ಯಾವುದೇ ಸಂಬಂಧವಿಲ್ಲ, ಶ್ರೀನಗರ ಮತ್ತು ಕಾಶ್ಮೀರಕ್ಕೂ ಸಹ ಯಾವುದೇ ಸಂಬಂಧವಿಲ್ಲ. ಅವರು ಮೊದಲು ಜಮ್ಮು ಮತ್ತು ಕಾಶ್ಮೀರದ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳನ್ನು ಖಾಲಿ ಮಾಡಲಿ ಎಂದು ಹೇಳಿದ್ದರು.

ಪ್ರಮುಖ ಸುದ್ದಿ :-   ಮೋದಿ, ರಾಹುಲ್ ಗಾಂಧಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಉತ್ತರ ನೀಡಲು ಚುನಾವಣಾ ಆಯೋಗ ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement