ಕುಮಟಾ: ನೀರಿನ ಟ್ಯಾಂಕ್‌ನಲ್ಲಿ ಮುಳುಗಿಸಿ ಮಗನನ್ನು ಸಾಯಿಸಿದ ನಂತರ ತಾನೂ ಆತ್ಮಹತ್ಯೆಗೆ ಶರಣಾದ ತಂದೆ

ಕುಮಟಾ: ಮಗನನ್ನು ನೀರಿನ ಟ್ಯಾಂಕ್‌ನಲ್ಲಿ ಮುಳುಗಿಸಿ ಸಾಯಿಸಿದ ನಂತರ ಬಳಿಕ ತಂದೆಯೂ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಉತ್ತರಕ್ನಡನ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ನಡೆದಿದೆ.
ಕುಮಟಾ ಪಟ್ಟಣದ ಹಳೇ ಮೀನು ಮಾರುಕಟ್ಟೆ ಸಮೀಪದ ಪುರಸಭೆಯ ವಸತಿ ಗೃಹಹದಲ್ಲಿ ವಾಸಿಸುತ್ತಿದ್ದ ಪೌರಕಾರ್ಮಿಕ ಶ್ರೀಧರ ಹರಿಜನ (46) ಎಂಬವರೇ ತನ್ನ ವಿಕಲಚೇತನ ಮಗನನ್ನು ಕೊಂದು ಆತ್ಮಹತ್ಯೆಗೆ ಶರಣಾದವರು. ಶುಕ್ರವಾರ ತಡರಾತ್ರಿ ತಂದೆ ಶ್ರೀಧರ ಹರಿಜನ ವಿಕಲಚೇತನ ಮಗನಾದ ಪ್ರೀತಂ ಹರಿಜನ (15) ಎಂಬಾತನನ್ನು ನೀರಿನ ಟ್ಯಾಂಕ್‌ನಲ್ಲಿ ಮುಳುಗಿಸಿ ನಂತರ ತಾನು ಸಹ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ. ಪ್ರೀತಂ ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ. ಎಷ್ಟೇ ಚಿಕಿತ್ಸೆ ನೀಡಿದರೂ ಕಡಿಮೆಯಾಗಿರಲಿಲ್ಲ. ಪ್ರೀತಮ್ ಅನಾರೋಗ್ಯದಿಂದ ಮಾನಸಿಕವಾಗಿ ಆತನ ತಂದೆ ಶ್ರೀಧರ ಕುಗ್ಗಿ ಹೋಗಿದ್ದರು.  ಮಾನಸಿಕ ಖಿನ್ನತೆಗೆ ಒಳಗಾಗಿ ತಂದೆ ಈ ಕೃತ್ಯ ಎಸಗಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಇಂದು, ಶನಿವಾರ ಮುಂಜಾನೆ ವಿಷಯ ತಿಳಿಯುತ್ತಿದ್ದಂತೆ ಅಕ್ಕ ಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಕುಮಟಾ ಠಾಣೆ ಪೊಲೀಸರು, ಶವವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಒಯ್ದು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ: ಇಬ್ಬರು ಆರೋಪಿಗಳ ಮಾಹಿತಿ ನೀಡಿದವರಿಗೆ ತಲಾ ₹10 ಲಕ್ಷ ಬಹುಮಾನ ಘೋಚಿಸಿದ ಎನ್‌ ಐ ಎ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement