ಕರ್ನಾಟಕಕ್ಕೆ ಜೂನ್​ 2ನೇ ವಾರದಲ್ಲಿ ಮುಂಗಾರು ಮಳೆ ಪ್ರವೇಶ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಈ ಸಾಲಿನ ಮುಂಗಾರು (Monsoon) ಮಳೆ ಸ್ವಲ್ಪ ವಿಳಂಬವಾಗಿ ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
​ವಾಡಿಕೆಯಂತೆ ಕೇರಳ ರಾಜ್ಯಕ್ಕೆ ಮೊದಲು ಮುಂಗಾರು (Kerala Monsoon) ಪ್ರವೇಶವಾಗುತ್ತದೆ. ಕೇರಳಕ್ಕೆ ನಾಲ್ಕು ದಿನ ತಡವಾಗಿ ಅಂದರೆ ಜೂನ್​ 4 ರಂದು ಮುಂಗಾರು ಪ್ರವೇಶಿಸಲಿದೆ. ಕರ್ನಾಟಕಕ್ಕೆ ಮುಂಗಾರು ಮಳೆ (Karnataka Monsoon) ಒಂದು ವಾರದ ಬಳಿಕ, ಅಂದರೆ ಜೂನ್​ ಎರಡನೇ ವಾರದಲ್ಲಿ ಪ್ರವೇಶಿಸಲಿದೆ. ಹವಾಮಾನ ವೈಪರೀತ್ಯದಿಂದ ಮುಂಗಾರು ಪ್ರವೇಶ ವಿಳಂಬವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಈ ವರ್ಷ ನಾಲ್ಕು ದಿನ ತಡವಾಗಿ ಮುಂಗಾರು ಮಾರುತಗಳು ಕೇರಳಕ್ಕೆ ಪ್ರವೇಶಿಸಲಿದ್ದು, ಇದರಿಂದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಂಗಾರು ಮಳೆಯ ಆರಂಭ ಒಂದು ವಾರ ತಡವಾಗಲಿದೆ. ಭಾರತದ ಬಹುತೇಕ ಭಾಗದ ಕೃಷಿ ಚಟುವಟಿಕೆಗಳಿಗೆ ನೈರುತ್ಯ ಮುಂಗಾರು ಆಧಾರವಾಗಿದೆ. ಭಾರತದ ಕೃಷಿ ಸಚಿವಾಲಯದ ಪ್ರಕಾರ, ಭಾರತದ ಕೃಷಿ ಪ್ರದೇಶದ ಶೇಕಡಾ 51 ರಷ್ಟು ಉತ್ಪಾದನೆಯ ಶೇಕಡಾ 40ರಷ್ಟು ಭಾಗ ಮಳೆ ಆಧಾರಿತವಾಗಿದೆ. ಈ ವರ್ಷದ ಆರ್ಥಿಕ ಸಮೀಕ್ಷೆಯ ಪ್ರಕಾರ ಭಾರತದ ಜನಸಂಖ್ಯೆಯ ಶೇ.47 ರಷ್ಟು ಜನರು ತಮ್ಮ ಜೀವನೋಪಾಯಕ್ಕಾಗಿ ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಬೆಂಗಳೂರು : ಸರಳ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಗಳ ಮದುವೆ

 

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement