ಕುಖ್ಯಾತ ರೌಡಿಶೀಟರ್ ಅಲ್ಯೂಮಿನಿಯಂ ಬಾಬು ಹತ್ಯೆ; ಕಾಡಿನಲ್ಲಿ ಅರೆಬೆಂದ ಸ್ಥಿತಿಯಲ್ಲಿ ಶವ ಪತ್ತೆ

posted in: ರಾಜ್ಯ | 0

ಬೆಂಗಳೂರು: ನಟೋರಿಯಸ್​ ರೌಡಿಶೀಟರ್ ಸುರೇಶಬಾಬು ಅಲಿಯಾಸ್​ ಅಲ್ಯೂಮಿನಿಯಂ ಬಾಬುವಿನ ಬರ್ಬರ ಹತ್ಯೆಯಾಗಿದ್ದು, ಆತನ ಶವ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಡೆಂಕಣಿಕೋಟೆ ಸಮೀಪದ ಕಾಡಿನಲ್ಲಿ ಪತ್ತೆಯಾಗಿದೆ.
ನಿನ್ನೆ ಶನಿವಾರ (ಮೇ 20) ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಅಲ್ಯೂಮಿನಿಯಂ ಬಾಬು ಜಯನಗರ ಪೊಲೀಸ್​ ಠಾಣೆಯ ರೌಡಿಶೀಟರ್ ಆಗಿದ್ದ. ಕೊಲೆ, ಸುಲಿಗೆ, ಬೆದರಿಕೆ ಹಾಗೂ ದರೋಡೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಬಾಬು ಭಾಗಿಯಾಗಿದ್ದ. ಆತ ಇತ್ತೀಚೆಗೆ ಬೆಂಗಳೂರಿನಿಂದ ತಮಿಳುನಾಡಿಗೆ ವಾಸ್ತವ್ಯ ಬದಲಿಸಿದ್ದ. ಇದೀಗ ಕೃಷ್ಣಗಿರಿ ತಾಲೂಕಿನ ಡೆಂಕಣಕೋಟೆ ಅರಣ್ಯ ಪ್ರದೇಶದಲ್ಲಿ ಆತನ ಶವ ಪತ್ತೆಯಾಗಿದೆ.
ಈತನನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನ ಡೆಂಕಣಕೋಟೆ ಕಾಡಿನಲ್ಲಿ, ಪ್ಲಾಸ್ಟಿಕ್ ಚೀಲದಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಹತ್ಯೆ ನಡೆಸಿದ ಬಳಿಕ ಶವವನ್ನು ಕಾಡಿನಲ್ಲಿ ಎಸೆದು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ತಮಿಳುನಾಡಿನ ತಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಅಕ್ರಮದ ಬಗ್ಗೆ ತನಿಖೆಗೆ ಸಿಎಂ ಸೂಚನೆ

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement