ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಡುವೆ ನಡೆದ ಸಭೆಯಲ್ಲಿ ಪಾಟ್ನಾದಲ್ಲಿ ವಿರೋಧ ಪಕ್ಷಗಳ ನಾಯಕರ ಬೃಹತ್ ಸಭೆ ಮತ್ತು ಬಿಜೆಪಿಯೇತರ ಪಕ್ಷಗಳ ಮೈತ್ರಿ ರಚನೆಯ ಮಾರ್ಗಸೂಚಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ ಮತ್ತು ಜೆಡಿಯು ಮುಖ್ಯಸ್ಥ ಲಲನ್ ಸಿಂಗ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.
2024ರ ಲೋಕಸಭೆ ಚುನಾವಣೆಗೆ ಮುನ್ನ ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗಿರುವ ನಿತೀಶಕುಮಾರ, ಕಾಂಗ್ರೆಸ್ ಮುಖ್ಯಸ್ಥರ ರಾಜಾಜಿ ಮಾರ್ಗ್ ನಿವಾಸದಲ್ಲಿ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು.
ಸಭೆಯ ನಂತರ ಕೆ.ಸಿ.ವೇಣುಗೋಪಾಲ ಮತ್ತು ಲಲನ್ ಸಿಂಗ್ ಅವರು ಪ್ರತಿಪಕ್ಷ ನಾಯಕರ ಸಭೆಯ ದಿನಾಂಕ ಮತ್ತು ಸ್ಥಳವನ್ನು “ಒಂದು ಅಥವಾ ಎರಡು ದಿನಗಳಲ್ಲಿ” ಪ್ರಕಟಿಸಲಾಗುವುದು ಎಂದು ಹೇಳಿದರು. ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಗಳು ಭಾಗವಹಿಸಲಿವೆ ಎಂದು ವೇಣುಗೋಪಾಲ ತಿಳಿಸಿದರು.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದ ನಂತರ ಪಾಟ್ನಾದಲ್ಲಿ ಪ್ರತಿಪಕ್ಷ ನಾಯಕರ ಸಭೆಯನ್ನು ಯೋಜಿಸುತ್ತಿದ್ದೇನೆ ಮತ್ತು ಸಮಾನ ಮನಸ್ಕ ಪಕ್ಷಗಳ ಮೈತ್ರಿಗೆ ಸಂಬಂಧಿಸಿದ ವಿಷಯಗಳನ್ನು ಅಲ್ಲಿ ಸುದೀರ್ಘವಾಗಿ ಚರ್ಚಿಸಲಾಗುವುದು ಎಂದು ನಿತೀಶಕುಮಾರ ಅವರು ಈ ತಿಂಗಳ ಆರಂಭದಲ್ಲಿ ಸುಳಿವು ನೀಡಿದ್ದರು.
ನಿತೀಶಕುಮಾರ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾದ ಒಂದು ದಿನದ ನಂತರ ಮತ್ತು ಆಡಳಿತಾತ್ಮಕ ಸೇವೆಗಳ ನಿಯಂತ್ರಣದ ಕುರಿತು ಕೇಂದ್ರದೊಂದಿಗೆ ಎಎಪಿ ನಡೆಯುತ್ತಿರುವ ಸಂಘರ್ಷದಲ್ಲಿ ಅವರಿಗೆ “ಸಂಪೂರ್ಣ ಬೆಂಬಲ” ನೀಡಿದ ಒಂದು ದಿನದ ನಂತರ ಸಭೆ ಬಂದಿದೆ.
ಒಂದು ತಿಂಗಳ ಅವಧಿಯಲ್ಲಿ ಇದು ನಿತೀಶಕುಮಾರ ಮತ್ತು ಕೇಜ್ರಿವಾಲ್ ನಡುವಿನ ಎರಡನೇ ಸಭೆಯಾಗಿದೆ. ಅವರು ಈ ಹಿಂದೆ ಏಪ್ರಿಲ್ 12 ರಂದು ದೆಹಲಿಯಲ್ಲಿ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ್ದರು.
ಸುಗ್ರೀವಾಜ್ಞೆಯನ್ನು ಪರಿಚಯಿಸುವ ಮೂಲಕ ಅಧಿಕಾರಶಾಹಿ ಮೇಲಿನ ಹಿಡಿತವನ್ನು ಕೇಂದ್ರವು ಪುನಃ ತನ್ನ ತೆಕ್ಕೆಗೆ ತೆಗೆದುಕೊಂಡಿರುವುದನ್ನು ಟೀಕಿಸಿದ ಕೇಜ್ರಿವಾಲ್, ಈ ವಿಷಯದ ಬಗ್ಗೆ ಬೆಂಬಲ ನೀಡುವಂತೆ ಕೋರಿ ವಿವಿಧ ಪಕ್ಷಗಳ ನಾಯಕರನ್ನು ಭೇಟಿಯಾಗುವುದಾಗಿ ಹೇಳಿದರು.
“ರಾಜ್ಯಸಭೆಯಲ್ಲಿ ಮಸೂದೆ ಸೋತರೆ, 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತದೆ ಎಂಬ ಸಂದೇಶವನ್ನು ರವಾನಿಸುತ್ತದೆ. ಇದು 2024 ರ ಲೋಕಸಭೆ ಚುನಾವಣೆಗೆ ಸೆಮಿಫೈನಲ್ ಆಗಲಿದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಇತ್ತೀಚೆಗಷ್ಟೇ ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನಿತೀಶಕುಮಾರ ಮತ್ತು ಪ್ರತಿಪಕ್ಷ ನಾಯಕರಾದ ತೇಜಸ್ವಿ ಯಾದವ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ ಸೊರೇನ್, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಭಾಗವಹಿಸಿದ್ದರು. .
ನಿಮ್ಮ ಕಾಮೆಂಟ್ ಬರೆಯಿರಿ