ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ : ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ದ ದೂರು ದಾಖಲು

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಕೊಲೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ದಾಖಲಾದ ದೂರಿನ ಆಧಾರದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್ಐಆರ್‌ ದಾಖಲಾಗಿದೆ.
ಕೋಮು ಪ್ರಚೋದಕ ಹಾಗೂ ದ್ವೇಷ ಉಂಟಾಗುವ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ಶಾಸಕ ಹರೀಶ ಪೂಂಜಾ ಮೇ 22 ರಂದು ಬೆಳ್ತಂಗಡಿಯ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದರ ವಿರುದ್ಧ ಪ್ರಕರಣ ದಾಖಲಾಗಿದೆ. ತುಳುವಿನಲ್ಲಿ‌ ಮಾಡಿದ ಭಾಷಣದ ವೇಳೆ ಪೂಂಜಾ ಯಡವಟ್ಟು ಮಾಡಿದ್ದರು
ಪೂಂಜಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಬುಧವಾರ ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ನಮಿತ ಕೆ ಪೂಜಾರಿ ನೀಡಿದ ದೂರಿನ ಮೇರೆಗೆ ಶಾಸಕ ಹರೀಶ ಪೂಂಜಾ ಹಾಗೂ ಬಿಜೆಪಿ ಅಧ್ಯಕ್ಷ ಜಯಂತ ಕೋಟ್ಯಾನ್ ವಿರುದ್ಧ ಐಪಿಸಿ ಸೆಕ್ಷನ್ 153, 153ಎ, 505 ರಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬೆಂಗಳೂರು, ತೀರ್ಥಹಳ್ಳಿ, ಚೆನ್ನೈ ಸೇರಿದಂತೆ ಅನೇಕ ಕಡೆ ಎನ್‌ಐಎ ದಾಳಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement