ಧಾರವಾಡದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ

ಧಾರವಾಡ: ರಿಯಲ್​ ಎಸ್ಟೇಟ್​ ಉದ್ಯಮಿ ಸೇರಿ ಇಬ್ಬರನ್ನು ತಡರಾತ್ರಿ ಬರ್ಬರವಾಗಿ ಹತ್ಯೆಯಾದ ಘಟನೆ ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ನಡೆದ ವರದಿಯಾಗಿದೆ.
ಕೊಲೆಯಾದವನನ್ನು ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್​ ಕುಡಚಿ ಎಂದು ಗುರುತಿಸಲಾಗಿದೆ. ಮಹಮ್ಮದ್​ ಕುಡಚಿ ಮನೆಯ ಮುಂದೆ ಕುಳಿತಿದ್ದಾಗ ದುಷ್ಕರ್ಮಿಗಳ ಗುಂಪೊಂದು ಏಕಾಏಕಿ ದಾಳಿ ಮಾಡಿ, ಕುಡಚಿಯನ್ನು ಮಚ್ಚಿನಿಂದಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದೆ ಎಂದು ಹೇಳಲಾಗಿದೆ. ಕುಡಚಿ ನಿವಾಸದ ಅನತಿ ದೂರದಲ್ಲೇ ಮತ್ತೊಂದು ಶವ ಪ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತನ ಹೆಸರು ಇನ್ನೂ ತಿಳಿದುಬಂದಿಲ್ಲ. ಆತನೂ ಸಹ ಕುಡಚಿ ಮನೆಯಿಂದಲೇ ಓಡಿ ಹೋಗಿ ಬೇರೆ ಜಾಗದಲ್ಲಿ ಪ್ರಾಣ ಬಿಟ್ಟಿದ್ದಾನೆ ಎನ್ನಲಾಗಿದೆ. ದಾರಿಯುದ್ದಕ್ಕೂ ರಕ್ತ ಚೆಲ್ಲಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ರಮಣಗುಪ್ತ ಭೇಟಿ ಪರಿಶೀಲನೆ ನಡೆಸಿದ್ದಾರೆ. ಧಾರವಾಡದ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement