ಜುಲೈನಲ್ಲಿ ಧಾರವಾಡ-ಬೆಂಗಳೂರು ನಡುವೆ `ವಂದೇ ಭಾರತ ರೈಲು’ ಸಂಚಾರ ಆರಂಭ : ಸಚಿವ ಪ್ರಹ್ಲಾದ ಜೋಶಿ

ಧಾರವಾಡ : ಜುಲೈ ತಿಂಗಳಲ್ಲಿ ಧಾರವಾಡ-ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಈ ಕುರಿತು ಟ್ವೀಟರಿನಲ್ಲಿ ಮಾಹಿತಿ ನೀಡಿರುವ ಅವರು, ಜುಲೈನಲ್ಲಿ ಧಾರವಾಡ – ಬೆಂಗಳೂರು ವಂದೇ ಭಾರತ ರೈಲಿಗೆ ಚಾಲನೆ ನೀಡಲಾಗುವುದು. ಬಹು ನಿರೀಕ್ಷೆಯ ಧಾರವಾಡ – ಬೆಂಗಳೂರು ನಡುವಿನ ವಂದೇ ಭಾರತ ರೈಲಿನ ಸೇವೆ ಇನ್ನು ಕೆಲವೇ ದಿನಗಳಲ್ಲಿ ವಿಧ್ಯುಕ್ತವಾಗಿ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ಇಂದು, ಗುರುವಾರ ದೆಹಲಿಯಲ್ಲಿ ಕೇಂದ್ರ ರೈಲ್ವೇ ಮಂತ್ರಿ ಅಶ್ವಿನಿ ವೈಷ್ಣವ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚೆ ನಡೆಸಿದ್ದು, ರೈಲು ಸೇವೆಯ ಆರಂಭಕ್ಕೆ ಬೇಕಾದ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಜುಲೈ ವೇಳೆಗೆ ರಾಜ್ಯದ ಎರಡನೇ ವಂದೇ ಭಾರತ್ ರೈಲಿಗೆ ಚಾಲನೆ ನೀಡುವ ಭರವಸೆಯನ್ನು ಸಚಿವರು ನೀಡಿದ್ದಾರೆ. ಅವಳಿ ನಗರದ ಜನರ ಬಹು ನಿರೀಕ್ಷಿತ ಈ ಉತ್ಕಷ್ಟ ರೈಲಿನ ಪ್ರಯಾಣದ ಅನುಭವವನ್ನು ಶೀಘ್ರದಲ್ಲಿಯೇ ಆಸ್ವಾದಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement