ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ಸಂಬಂಧ ಇಂದು ಅಧಿಸೂಚನೆ ಹೊರಡಿಸಿದ್ದು, ಹೊರ್ಟಿಕಲ್ಚರ್ ಮತ್ತು ಸೆರಿಕಲ್ಟರ್ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದ ರಾಜೇಂದ್ರಕುಮಾರ ಕಠಾರಿಯ ಅವರನ್ನು ವರ್ಗಾವಣೆ ಮಾಡಿದ್ದು, ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ.
ಐಎಎಸ್ ಅಧಿಕಾರಿ ಪಂಕಜಕುಮಾರ ಪಾಂಡೆ ಅವರನ್ನು ಎಂಎಸ್ಎಂಇ ಮತ್ತು ಮೈನ್ಸ್ ಕಾರ್ಯದರ್ಶಿಯ ಹುದ್ದೆಯಿಂದ ವರ್ಗಾವಣೆ ಮಾಡಿ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ(ಎಂ.ಡಿ.)ರಾಗಿ ನೇಮಕ ಮಾಡಿದೆ..
ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಡಾ.ಮಂಜುಳಾ ಎನ್. ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಯುವಜನ ಸಬಲೀಕರಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ. ಕೃಷಿ ಇಲಾಖೆಯ ಆಯುಕ್ತರಾಗಿದ್ದ ಶರತ ಬಿ. ಅವರನ್ನು ವರ್ಗಾವಣೆ ಮಾಡಿ ಕರ್ನಾಟಕ ಅರ್ಬನ್ ವಾಟರ್ ಸಪ್ಲೈ ಮತ್ತು ಡ್ರೈನೇಜ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕ(ಎಂ.ಡಿ.)ರಾಗಿ ನೇಮಕ ಮಾಡಲಾಗಿದೆ. ಆ ಸ್ಥಾನದಲ್ಲಿದ್ದ ಮೋಹನರಾಜ ಕೆ.ಪಿ ಅವರನ್ನುವರ್ಗಾವಣೆ ಮಾಡಲಾಗಿದ್ದು, ಸ್ಥಳ ನಿಯೋಜನೆ ಮಾಡಲಾಗಿಲ್ಲ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement